ನರೇಂದ್ರ ಮೋದಿ, ಕ್ಷಿ ಜಿನ್​ಪಿಂಗ್ 
ವಿದೇಶ

ತಾಷ್ಕೆಂಟ್ ನಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್​ಪಿಂಗ್ ಭೇಟಿ ಮಾಡಿದ ಪ್ರಧಾನಿ ಮೋದಿ

ಶಾಂಘೈಸಹಕಾರ ಒಕ್ಕೂಟ(ಎಸ್​ಸಿಒ)ದ ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಉಜ್ಬೆಕಿಸ್ತಾನಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ...

ತಾಷ್ಕೆಂಟ್: ಶಾಂಘೈಸಹಕಾರ ಒಕ್ಕೂಟ(ಎಸ್​ಸಿಒ)ದ ಶೃಂಗಸಭೆಯಲ್ಲಿ ಭಾಗವಹಿಸಲು ಗುರುವಾರ ಉಜ್ಬೆಕಿಸ್ತಾನಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಉಜ್ಬೆಕಿಸ್ತಾನದ ರಾಜಧಾನಿ ತಾಷ್ಕೆಂಟ್ ತಲುಪಿದ್ದು, ಅಲ್ಲಿ ಚೀನಾ ಅಧ್ಯಕ್ಷ ಕ್ಷಿ ಜಿನ್​ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ. 
ಮೋದಿ ಹಾಗೂ ಜಿನ್ ಪಿಂಗ್ ಮಾತುಕತೆಯ ವಿವರ ಲಭ್ಯವಾಗಿಲ್ಲ. ಆದರೆ ಸಿಯೋಲ್​ನಲ್ಲಿ ನಡೆಯುತ್ತಿರುವ ಪರಮಾಣು ಪೂರೈಕೆದಾರರ ಸಮೂಹದ (ಎನ್​ಎಸ್​ಜಿ) ಸಭೆಗೂ ಮುನ್ನ ಮೋದಿ ಚೀನಾ ಅಧ್ಯಕ್ಷರನ್ನು ಭೇಟಿ ಮಾಡಿದ್ದು ಮಹತ್ವ ಪಡೆದುಕೊಂಡಿದೆ. ಇಂದು ಸಂಜೆ ಭಾರತಕ್ಕೆ ಎನ್ಎಸ್ ಜಿ ಸದಸ್ಯತ್ವ ನೀಡುವ ವಿಚಾರ ಚರ್ಚೆಗೆ ಬರಲಿದೆ.
48 ರಾಷ್ಟ್ರಗಳು ಸದಸ್ಯತ್ವ ಹೊಂದಿರುವ ಪರಮಾಣು ಇಂಧನ ಪೂರೈಕೆ ಸಮೂಹದ(ಎನ್ಎಸ್ ಜಿ) ಸದಸ್ಯತ್ವಕ್ಕೆ ಭಾರತ ಮತ್ತು ಪಾಕಿಸ್ತಾನ ಅರ್ಜಿ ಸಲ್ಲಿಸಿದ್ದು, ಭಾರತದ ಅರ್ಜಿಯ ಬಗ್ಗೆ ಇಂದು ಚರ್ಚಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಎರಡು ದಿನಗಳ ಕಾಲ ನಡೆಯುವ ಸಭೆಯ ಕಾಲದಲ್ಲಿ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮುಖಂಡರನ್ನು ಮೋದಿ ಭೇಟಿ ಮಾಡಲಿದ್ದಾರೆ. ಉಜ್ಬೆಕ್ ಪ್ರಧಾನಿ ಶವಕತ್ ಮಿರ್ಜಿಯೊಯೆವ್ ಅವರು ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಸ್ವಾಗತಿಸಿದರು.
ಶಾಂಘೈ ಸಹಕಾರ ಸಂಘಟನೆ (ಶಾಂಘೈ ಕೋ ಆಪರೇಷನ್ ಆರ್ಗನೈಜೇಷನ್ -ಎಸ್​ಸಿಒ) ಶೃಂಗ ಸಭೆ ಭಾರತ ಮತ್ತು ಪಾಕ್ ಸೇರಿದಂತೆ ವಿವಿಧ ರಾಷ್ಟ್ರಗಳ ಸಂಘಟನಾತ್ಮಕ ಸಹಭಾಗಿತ್ವ ಬೆಸೆಯುವುದರೊಂದಿಗೆ ಅರ್ಥಿಕ ವಹಿವಾಟು ವೃದ್ಧಿಗೊಳಿಸುವ ಬಾಂಧವ್ಯಕ್ಕೂ ಮಹತ್ವ ದೊರಕಿಸಿಕೊಡಲಿದೆ.
ಎಸ್​ಸಿಒ ಸದಸ್ಯತ್ವ ಪಡೆಯಲು ಮತ್ತು ಇದರಿಂದ ಉತ್ತಮ ಫಲಿತಾಂಶ ದೊರಕುವಂತಾಗಲು ಶೃಂಗ ಸಭೆಯಲ್ಲಿ ಭಾರತ ಸಕ್ರಿಯವಾಗಿ ಭಾಗಿಯಾಗಲಿದೆ. ಮಧ್ಯಏಷ್ಯಾದ ರಾಷ್ಟ್ರಗಳೊಂದಿಗೆ ಸೌಹಾರ್ದ ಸಂಬಂಧ ಪಾಲನೆ ಮಾಡಲು ಭಾರತ ಉತ್ಸುಕವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಚೀನಾ ಅಧ್ಯಕ್ಷ ಕ್ಷಿ ಜಿನ್​ಪೆಂಗ್ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ಇದೇ ವೇಳೆ ನಡೆಸಲಿರುವ ಮೋದಿ, ಎನ್​ಎಸ್​ಜಿ (ನ್ಯೂಕ್ಲಿಯರ್ ಸಪ್ಲೇ ಗ್ರೂಪ್) ಸದಸ್ಯತ್ವ ಪಡೆಯವ ನಿಟ್ಟಿನಲ್ಲಿ ಚರ್ಚೆ ನಡೆಸಲಿರುವುದು ವಿಶೇಷ ಮಹತ್ವ ಪಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT