ವಿಕಾಸ್ ಸ್ವರೂಪ್ 
ವಿದೇಶ

ಭಾರತದ ಎನ್​ಎಸ್​ಜಿ ಸದಸ್ಯತ್ವಕ್ಕೆ ಒಂದು ದೇಶದಿಂದ ಅಡೆತಡೆ: ಎಂಇಎ

ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್​ಜಿ) ಸದಸ್ಯತ್ವಕ್ಕಾಗಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ...

ತಾಷ್ಕೆಂಟ್: ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್​ಜಿ) ಸದಸ್ಯತ್ವಕ್ಕಾಗಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಭಾರತ, ‘ಒಂದು ದೇಶ ನಿರಂತರವಾಗಿ ಸದಸ್ಯತ್ವಕ್ಕೆ ಸಂಬಂಧಿಸಿದ ವಿಧಿವಿಧಾನಕ್ಕೆ ಅಡೆತಡೆಗಳನ್ನು ಒಡ್ಡುತ್ತಿದೆ’ಎಂದು ಪರೋಕ್ಷವಾಗಿ ಶುಕ್ರವಾರ ಚೀನಾದ ವಿರುದ್ಧ ವಾಗ್ದಾಳಿ ನಡೆಸಿದೆ.
ಸಿಯೋಲ್ ನಲ್ಲಿ ನಡೆದ ಎನ್ ಎಸ್ ಜಿ ಸಭೆ ಭಾರತದ ಅರ್ಜಿಯ ಬಗ್ಗೆ ಯಾವುದೇ ನಿರ್ಣಯವನ್ನೂ ಕೈಗೊಳ್ಳದೆ ಮುಕ್ತಾಯಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು, ಎನ್​ಎಸ್​ಜಿಯಲ್ಲಿ ಭಾರತದ ಪಾಲ್ಗೊಳ್ಳುವಿಕೆಯಿಂದ ಅಣ್ವಸ್ತ್ರ ಪ್ರಸರಣ ನಿಷೇಧವು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು,
ಸಭೆಯಲ್ಲಿ ಪಾಲ್ಗೊಂಡಿದ್ದ ಬಹುಸಂಖ್ಯಾತ ಸದಸ್ಯರು ಭಾರತದ ಸದಸ್ಯತ್ವವನ್ನು ಬೆಂಬಲಿಸಿದ್ದಾರೆ ಮತ್ತು ಭಾರತದ ಅರ್ಜಿಯ ಬಗ್ಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದರು.
ಭಾರತವನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಸಲ್ಲಿಸುತ್ತೇವೆ. ಈ ವಿಷಯವನ್ನು ಮುಂದಕ್ಕೆ ಒಯ್ಯಲು ವಿಶಾಲ ಭಾವನೆಯ ಅಗತ್ಯವಿದೆ ಎಂಬುದು ನಮ್ಮ ಅಭಿಪ್ರಾಯ ಎಂದು ಸ್ವರೂಪ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT