ವಿಕಾಸ್ ಸ್ವರೂಪ್ 
ವಿದೇಶ

ಭಾರತದ ಎನ್​ಎಸ್​ಜಿ ಸದಸ್ಯತ್ವಕ್ಕೆ ಒಂದು ದೇಶದಿಂದ ಅಡೆತಡೆ: ಎಂಇಎ

ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್​ಜಿ) ಸದಸ್ಯತ್ವಕ್ಕಾಗಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ...

ತಾಷ್ಕೆಂಟ್: ಪರಮಾಣು ಪೂರೈಕೆದಾರರ ಸಮೂಹದ(ಎನ್ಎಸ್​ಜಿ) ಸದಸ್ಯತ್ವಕ್ಕಾಗಿ ಭಾರತ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಭಾರತ, ‘ಒಂದು ದೇಶ ನಿರಂತರವಾಗಿ ಸದಸ್ಯತ್ವಕ್ಕೆ ಸಂಬಂಧಿಸಿದ ವಿಧಿವಿಧಾನಕ್ಕೆ ಅಡೆತಡೆಗಳನ್ನು ಒಡ್ಡುತ್ತಿದೆ’ಎಂದು ಪರೋಕ್ಷವಾಗಿ ಶುಕ್ರವಾರ ಚೀನಾದ ವಿರುದ್ಧ ವಾಗ್ದಾಳಿ ನಡೆಸಿದೆ.
ಸಿಯೋಲ್ ನಲ್ಲಿ ನಡೆದ ಎನ್ ಎಸ್ ಜಿ ಸಭೆ ಭಾರತದ ಅರ್ಜಿಯ ಬಗ್ಗೆ ಯಾವುದೇ ನಿರ್ಣಯವನ್ನೂ ಕೈಗೊಳ್ಳದೆ ಮುಕ್ತಾಯಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು, ಎನ್​ಎಸ್​ಜಿಯಲ್ಲಿ ಭಾರತದ ಪಾಲ್ಗೊಳ್ಳುವಿಕೆಯಿಂದ ಅಣ್ವಸ್ತ್ರ ಪ್ರಸರಣ ನಿಷೇಧವು ಇನ್ನಷ್ಟು ಬಲಗೊಳ್ಳಲಿದೆ ಎಂದು ಹೇಳಿದರು,
ಸಭೆಯಲ್ಲಿ ಪಾಲ್ಗೊಂಡಿದ್ದ ಬಹುಸಂಖ್ಯಾತ ಸದಸ್ಯರು ಭಾರತದ ಸದಸ್ಯತ್ವವನ್ನು ಬೆಂಬಲಿಸಿದ್ದಾರೆ ಮತ್ತು ಭಾರತದ ಅರ್ಜಿಯ ಬಗ್ಗೆ ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದರು.
ಭಾರತವನ್ನು ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಸಲ್ಲಿಸುತ್ತೇವೆ. ಈ ವಿಷಯವನ್ನು ಮುಂದಕ್ಕೆ ಒಯ್ಯಲು ವಿಶಾಲ ಭಾವನೆಯ ಅಗತ್ಯವಿದೆ ಎಂಬುದು ನಮ್ಮ ಅಭಿಪ್ರಾಯ ಎಂದು ಸ್ವರೂಪ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್