ಇಸಿಸ್ ದಾಳಿ (ಸಂಗ್ರಹ ಚಿತ್ರ) 
ವಿದೇಶ

ಲಿಬಿಯಾದಲ್ಲಿ ಟ್ಯುನಿಷಿಯಾ ಯೋಧರ ಮೇಲೆ ಉಗ್ರರ ದಾಳಿ; ಕನಿಷ್ಠ 53 ಸಾವು

ಲಿಬಿಯಾದಲ್ಲಿ ಇಸಿಸ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಲಿಬಿಯಾ ಗಡಿಯಲ್ಲಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಟ್ಯುನೀಷಿಯಾ ಯೋಧರ ಮೇಲೆ ದಾಳಿ ಮಾಡಿದ್ದಾರೆ...

ಟ್ರಿಪೋಲಿ: ಲಿಬಿಯಾದಲ್ಲಿ ಇಸಿಸ್ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಲಿಬಿಯಾ ಗಡಿಯಲ್ಲಿ ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಟ್ಯುನೀಷಿಯಾ ಯೋಧರ ಮೇಲೆ ದಾಳಿ ಮಾಡಿದ್ದಾರೆ.

ಇಸಿಸ್ ಉಗ್ರರ ಈ ಭೀಕರ ದಾಳಿಯಲ್ಲಿ ನಾಗರಿಕರು ಸೇರಿದಂತೆ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಭಾರಿ ಸಂಖ್ಯೆಯಲ್ಲಿದ್ದ ಇಸಿಸ್ ಉಗ್ರರು ಕ್ಷಣ ಮಾತ್ರದಲ್ಲಿ ಯೋಧರ  ಕ್ಯಾಂಪ್ ಗಳ ಮೇಲೆ ಗುಂಡಿನ ಸುರಿಮಳೆ ಗೈದಿದ್ದು, ಉಗ್ರರ ಗುಂಡಿನ ದಾಳಿ ತಪ್ಪಿಸಿಕೊಳ್ಳಲು ಯೋಧರು ಅಕ್ಕಪಕ್ಕದ ಮನೆಗಳ ಅಟ್ಟ ಮತ್ತು ಗೋಡೆಗಳ ಹಿಂದೆ ಅವಿತುಕೊಳ್ಳುತ್ತಿದ್ದುದು  ಸಾಮಾನ್ಯಾವಾಗಿತ್ತು. ಆದರೆ ನೋಡನೋಡುತ್ತಿದ್ದಂತೆಯೇ ಉಗ್ರರ ಈ ಪೈಶಾಚಿಕ ಕೃತ್ಯಕ್ಕೆ 53 ಮಂದಿ ಬಲಿಯಾಗಿದ್ದಾರೆ.

ಲಿಬಿಯಾ-ಟ್ಯುನೀಷಿಯಾದ ಗಡಿ ಭಾಗದಲ್ಲಿರುವ ಬೆನ್ ಗಾರ್ಡನ್ ನಗರದ ಬೀಚ್ ರೆಸಾರ್ಟ್ ಬಳಿ ಈ ಘಟನೆ ನಡೆದಿದ್ದು, ಪ್ರಸ್ತುತ ಗಡಿಗೆ ಸಂಪರ್ಕ ಕಲ್ಪಿಸುವ ಡ್ಜರ್ಬಾ ನಗರದ ಗಡಿ ರಸ್ತೆಗಳನ್ನು  ಮುಚ್ಚಲಾಗಿದೆ. ಅಲ್ಲದೆ ಸ್ಥಳದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಗಡಿಯಿಂದ ಹೊರಹೋಗುವ ಮತ್ತು ಒಳ ಬರುವ ಎಲ್ಲ ವಾಹನಗಳಿಗೆ ತಡೆ ನೀಡಲಾಗಿದೆ.

ಪ್ರತ್ಯಕ್ಷದರ್ಶಿಗಳು ಹೇಳಿರುವಂತೆ "ಹತ್ತಾರು ಸಂಖ್ಯೆಯಲ್ಲಿದ್ದ ಶಸ್ತ್ರಸಜ್ಜಿತ ಉಗ್ರರು ಏಕಾಏಕಿ ಗುಂಡಿನ ಸುರಿಮಳೆ ಗೈದರು. ಅವರು ನಾವು ಇಸ್ಲಾಮಿಕ್ ಸ್ಟೇಟ್ ನ ಯೋಧರಾಗಿದ್ದು, ತಮ್ಮ ವಿರುದ್ಧ  ಪಿತೂರಿ ನಡೆಸುತ್ತಿರುವ ಶತ್ರುಗಳ ವಿರುದ್ಧ ಕಾದಾಡಲು ಬಂದಿದ್ದೇವೆ ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಅಲ್ಲಗೆ ದಾಳಿ ಬಳಿಕ ಗಡಿ ಮೂಲಕವಾಗಿ ಓಡಿ ಹೋದರು ಎಂದು ಹೇಳಿದ್ದಾರೆ.

ಘಟನೆ ನಡೆದ ಸುಮಾರು 20 ಗಂಟೆಗಳೇ ಕಳೆದರೂ ಈವರೆಗೂ ಯಾವುದೇ ಉಗ್ರ ಸಂಘಟನೆ ಘಟನೆಯ ಜವಾಬ್ದಾರಿ ಹೊತ್ತಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT