ಸುಷ್ಮಾ ಸ್ವರಾಜ್ 
ವಿದೇಶ

40 ದಿನಗಳ ಬಳಿಕ ಭಾರತೀಯ ನಾವಿಕನನ್ನು ಬಿಡುಗಡೆ ಮಾಡಿದ ಕಡಲ್ಗಳ್ಳರು

ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ...

ನವದೆಹಲಿ: ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ.

ನಿರಂತರ ಪ್ರಯತ್ನದ ಫಲವಾಗಿ ಭಾರತೀಯ ನಾವಿಕನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಫೆಬ್ರವರಿ 11 ರಂದು ಐವರಿ ಕೋಸ್ಟ್​ನಲ್ಲಿ ಕಡಲ್ಗಳ್ಳರು 11 ಭಾರತೀಯ ನಾವಿಕನನ್ನು ಅಪಹರಿಸಿದ್ದರು. ನಂತರ ಫೆಬ್ರವರಿ 19 ರಂದು ನೈಜೀರಿಯಾ ನೌಕಾಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 10 ಭಾರತೀಯರನ್ನು ರಕ್ಷಿಸಲಾಗಿತ್ತು. ಆದರೆ ರೋಹನ್ ಅವರನ್ನು ಕಡಲ್ಗಳ್ಳರಿಂದ ಬಿಡುಗಡೆ ಮಾಡಿಸಲು ಸಾಧ್ಯವಾಗಿರಲಿಲ್ಲ.

ಭಾರತ ಸರ್ಕಾರ ಮತ್ತು ನೈಜೀರಿಯಾ ಸರ್ಕಾರ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ರೋಹನ್ ಅವರನ್ನು ಬಿಡುಗಡೆ ಮಾಡಿಸಲಾಗಿದೆ. ರೋಹನ್ ಭಾನುವಾರ ರಾತ್ರಿ ಸ್ವದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT