ಸುಷ್ಮಾ ಸ್ವರಾಜ್ 
ವಿದೇಶ

40 ದಿನಗಳ ಬಳಿಕ ಭಾರತೀಯ ನಾವಿಕನನ್ನು ಬಿಡುಗಡೆ ಮಾಡಿದ ಕಡಲ್ಗಳ್ಳರು

ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ...

ನವದೆಹಲಿ: ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ.

ನಿರಂತರ ಪ್ರಯತ್ನದ ಫಲವಾಗಿ ಭಾರತೀಯ ನಾವಿಕನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಫೆಬ್ರವರಿ 11 ರಂದು ಐವರಿ ಕೋಸ್ಟ್​ನಲ್ಲಿ ಕಡಲ್ಗಳ್ಳರು 11 ಭಾರತೀಯ ನಾವಿಕನನ್ನು ಅಪಹರಿಸಿದ್ದರು. ನಂತರ ಫೆಬ್ರವರಿ 19 ರಂದು ನೈಜೀರಿಯಾ ನೌಕಾಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 10 ಭಾರತೀಯರನ್ನು ರಕ್ಷಿಸಲಾಗಿತ್ತು. ಆದರೆ ರೋಹನ್ ಅವರನ್ನು ಕಡಲ್ಗಳ್ಳರಿಂದ ಬಿಡುಗಡೆ ಮಾಡಿಸಲು ಸಾಧ್ಯವಾಗಿರಲಿಲ್ಲ.

ಭಾರತ ಸರ್ಕಾರ ಮತ್ತು ನೈಜೀರಿಯಾ ಸರ್ಕಾರ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ರೋಹನ್ ಅವರನ್ನು ಬಿಡುಗಡೆ ಮಾಡಿಸಲಾಗಿದೆ. ರೋಹನ್ ಭಾನುವಾರ ರಾತ್ರಿ ಸ್ವದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT