ಸುಷ್ಮಾ ಸ್ವರಾಜ್ 
ವಿದೇಶ

40 ದಿನಗಳ ಬಳಿಕ ಭಾರತೀಯ ನಾವಿಕನನ್ನು ಬಿಡುಗಡೆ ಮಾಡಿದ ಕಡಲ್ಗಳ್ಳರು

ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ...

ನವದೆಹಲಿ: ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ.

ನಿರಂತರ ಪ್ರಯತ್ನದ ಫಲವಾಗಿ ಭಾರತೀಯ ನಾವಿಕನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಫೆಬ್ರವರಿ 11 ರಂದು ಐವರಿ ಕೋಸ್ಟ್​ನಲ್ಲಿ ಕಡಲ್ಗಳ್ಳರು 11 ಭಾರತೀಯ ನಾವಿಕನನ್ನು ಅಪಹರಿಸಿದ್ದರು. ನಂತರ ಫೆಬ್ರವರಿ 19 ರಂದು ನೈಜೀರಿಯಾ ನೌಕಾಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 10 ಭಾರತೀಯರನ್ನು ರಕ್ಷಿಸಲಾಗಿತ್ತು. ಆದರೆ ರೋಹನ್ ಅವರನ್ನು ಕಡಲ್ಗಳ್ಳರಿಂದ ಬಿಡುಗಡೆ ಮಾಡಿಸಲು ಸಾಧ್ಯವಾಗಿರಲಿಲ್ಲ.

ಭಾರತ ಸರ್ಕಾರ ಮತ್ತು ನೈಜೀರಿಯಾ ಸರ್ಕಾರ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ರೋಹನ್ ಅವರನ್ನು ಬಿಡುಗಡೆ ಮಾಡಿಸಲಾಗಿದೆ. ರೋಹನ್ ಭಾನುವಾರ ರಾತ್ರಿ ಸ್ವದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!