ಸುಷ್ಮಾ ಸ್ವರಾಜ್ 
ವಿದೇಶ

40 ದಿನಗಳ ಬಳಿಕ ಭಾರತೀಯ ನಾವಿಕನನ್ನು ಬಿಡುಗಡೆ ಮಾಡಿದ ಕಡಲ್ಗಳ್ಳರು

ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ...

ನವದೆಹಲಿ: ಸರಿಸುಮಾರು 40 ದಿನಗಳ ಬಳಿಕ ಒತ್ತೆಯಾಗಿರಿಸಿಕೊಂಡಿದ್ದ ಭಾರತೀಯ ನಾವಿಕನನ್ನು ಕಡಲ್ಗಳ್ಳರು ಬಿಡುಗಡೆ ಮಾಡಿದ್ದಾರೆ.

ನಿರಂತರ ಪ್ರಯತ್ನದ ಫಲವಾಗಿ ಭಾರತೀಯ ನಾವಿಕನನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಫೆಬ್ರವರಿ 11 ರಂದು ಐವರಿ ಕೋಸ್ಟ್​ನಲ್ಲಿ ಕಡಲ್ಗಳ್ಳರು 11 ಭಾರತೀಯ ನಾವಿಕನನ್ನು ಅಪಹರಿಸಿದ್ದರು. ನಂತರ ಫೆಬ್ರವರಿ 19 ರಂದು ನೈಜೀರಿಯಾ ನೌಕಾಪಡೆ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 10 ಭಾರತೀಯರನ್ನು ರಕ್ಷಿಸಲಾಗಿತ್ತು. ಆದರೆ ರೋಹನ್ ಅವರನ್ನು ಕಡಲ್ಗಳ್ಳರಿಂದ ಬಿಡುಗಡೆ ಮಾಡಿಸಲು ಸಾಧ್ಯವಾಗಿರಲಿಲ್ಲ.

ಭಾರತ ಸರ್ಕಾರ ಮತ್ತು ನೈಜೀರಿಯಾ ಸರ್ಕಾರ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ರೋಹನ್ ಅವರನ್ನು ಬಿಡುಗಡೆ ಮಾಡಿಸಲಾಗಿದೆ. ರೋಹನ್ ಭಾನುವಾರ ರಾತ್ರಿ ಸ್ವದೇಶಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT