ಸಾಂದರ್ಭಿಕ ಚಿತ್ರ 
ವಿದೇಶ

ಪಠಾಣ್ ಕೋಟ್ ದಾಳಿ: ಭಾರತಕ್ಕೆ ಆಗಮಿಸಿದ ಪಾಕ್ ತನಿಖಾ ತಂಡ

ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ...

ನವದೆಹಲಿ: ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸಲು ಐವರು ಅಧಿಕಾರಿಗಳನ್ನೊಳಗೊಂಡ ಪಾಕಿಸ್ತಾನ ತನಿಖಾ ತಂಡ ಭಾನುವಾರ ಭಾರತಕ್ಕೆ ಆಗಮಿಸಿದೆ.

ಇಂದು ಬೆಳಿಗ್ಗೆ ನವದೆಹಲಿಗೆ ಆಗಮಿಸಿರುವ ಪಾಕಿಸ್ತಾನದ ಜಂಟಿ ತನಿಖಾ ತಂಡ, ಸೋಮವಾರ ಬೆಳಗ್ಗೆ ರಾಷ್ಟ್ರೀಯ ಭದ್ರತಾ ಸಂಸ್ಥೆ(ಎನ್ಐಎ)ಯ ಪ್ರಧಾನ ಕಚೇರಿಗೆ ಭೇಟಿ ನೀಡಿಲಿದ್ದು, ಮಂಗಳವಾರ ಪಠಾಣ್ ಕೋಟ್ ಗೆ ತೆರಳಲಿದೆ ಎಂದು ಎಎನ್ಐ ವರದಿ ಮಾಡಿದೆ.

ನೇಪಾಳದಲ್ಲಿ ನಡೆದ ಸಾರ್ಕ್ ಸಭೆಯಲ್ಲಿ ಪಾಕಿಸ್ತಾನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ - ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್  ಭೇಟಿ ನಂತರ ಪಾಕ್ ತನಿಖಾ ತಂಡಕ್ಕೆ ವೀಸಾ ನೀಡಲಾಗಿತ್ತು.

ಜ.2 ರಂದು ಪಂಜಾಬ್ ನ ಪಠಾಣ್ ಕೋಟ್ ವಾಯು ನೆಲೆಯಲ್ಲಿ  ದಾಳಿ ನಡೆಸಿದ್ದ ಭಯೋತ್ಪಾದಕರಿಗೂ ಪಾಕಿಸ್ತಾನದ ಜೈಶ್-ಇ- ಮೊಹಮ್ಮದ್ ಉಗ್ರ ಸಂಘಟನೆಗೂ ನಂಟಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ರಚನೆ ಮಾಡಿರುವ ಜಂಟಿ ತನಿಖಾ ತಂಡ ತನಿಖೆ ನಡೆಸಲು ಭಾರತಕ್ಕೆ ಆಗಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ