ನೇಪಾಳ ರಾಯಭಾರಿ ದೀಪ್ ಕುಮಾರ್ ಉಪಾದ್ಯಾಯ (ಸಂಗ್ರಹ ಚಿತ್ರ) 
ವಿದೇಶ

ಭಾರತದಲ್ಲಿರುವ ನೇಪಾಳ ರಾಯಭಾರಿ ವಾಪಸ್ ಕರೆಸಿಕೊಂಡ ನೇಪಾಳ!

ಭಾರತದಲ್ಲಿರುವ ನೇಪಾಳದ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ಅವರನ್ನು ನೇಪಾಳ ಸರ್ಕಾರ ವಾಪಸ್ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ...

ಕಠ್ಮಂಡು: ಭಾರತದಲ್ಲಿರುವ ನೇಪಾಳದ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ ಅವರನ್ನು ನೇಪಾಳ ಸರ್ಕಾರ ವಾಪಸ್ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ.

ನೇಪಾಳ ಸರ್ಕಾರದೊಂದಿಗೆ ಅಸಹಕಾರ ತೋರಿದ ಹಿನ್ನೆಲೆಯಲ್ಲಿ ಭಾರದಲ್ಲಿ ನೇಪಾಳ ದೇಶದ ರಾಯಭಾರಿಯಾಗಿದ್ದ ದೀಪ್ ಕುಮಾರ್ ಉಪಾಧ್ಯಾಯ ಅವರನ್ನು ನೇಪಾಳ ಸರ್ಕಾರ ವಾಪಸ್  ಕರೆಸಿಕೊಂಡಿದ್ದು, ಆವರ ಸ್ಥಾನಕ್ಕೆ ಬೇರೊಬ್ಬ ರಾಯಭಾರಿಯನ್ನು ನೇಮಕ ಮಾಡುವ ಸಾಧ್ಯತೆ ಇದೆ ಎಂದು ನೇಪಾಳ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ.

ನೇಪಾಳದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಬಿಂದ್ಯಾ ಬಂಡಾರಿ ಅವರ ಭಾರತ ಭೇಟಿಯನ್ನು ಮುಂದೂಡಲು  ದೀಪ್ ಕುಮಾರ್ ಉಪಾಧ್ಯಾಯ ಅವರು ವಿರೋಧ  ವ್ಯಕ್ತಪಡಿಸಿದ್ದರು. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನೇಮಕವಾಗಿದ್ದ  ದೀಪ್ ಕುಮಾರ್ ಉಪಾಧ್ಯಾ ಅವರು ನೇಪಾಳದ ಕೆ.ಪಿ. ಒಲಿ ನೇತೃತ್ವದ ಸರ್ಕಾರವನ್ನು ಅಸ್ತಿರಗೊಳಿಸಲು ಪ್ರಯತ್ನಿಸಿರುವ  ಆರೋಪ ಎದುರಿಸುತ್ತಿದ್ದರು. ಅದಲ್ಲದೇ ಅನುಮತಿ ಇಲ್ಲದೇ ಮಧೇಸಿ ಹೋರಾಟಗಾರರ ಜತೆ ಮಾತುಕತೆ ನಡೆಸಿದ್ದರಿಂದ ಅವರ ವಿರುದ್ಧ ಅಸಾಮಾಧಾನಗೊಂಡಿದ್ದ ನೇಪಾಳ ಸರ್ಕಾರ ಇದೀಗ  ಅವರನ್ನು ಎತ್ತಂಗಡಿ ಮಾಡಿದೆ.

ಎತ್ತಂಗಡಿಗೆ ಕಾರಣವಾಯ್ತೆ ರಾಜಕೀಯ?
ಇನ್ನು ದೀಪ್ ಕುಮಾರ್ ಉಪಾಧ್ಯಾಯ ಅವರ ಎತ್ತಂಗಡಿದೆ ನೇಪಾಳ ರಾಜಕೀಯ ಕೂಡ ಕಾರಣ ಎಂದು ಹೇಳಲಾಗುತ್ತಿದ್ದು, ದೀಪ್ ಕುಮಾರ್ ಉಪಾಧ್ಯಾಯ ನೇಪಾಳ ಕಾಂಗ್ರೆಸ್ ನ ಪ್ರಮುಖ  ಮುಖಂಡರಾಗಿದ್ದಾರೆ. ಪ್ರಸ್ತುತ ನೇಪಾಳ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದ್ದು, ಇದೇ ಕಾರಣಕ್ಕಾಗಿ ಅವರನ್ನು ಎತ್ತಂಗಡಿ ಮಾಡಲಾಗಿದೆಯೇ ಎಂಬ ಅನುಮಾನ ಕೂಡ ಕಾಡತೊಡಗಿದೆ.

ನೇಪಾಳದಲ್ಲಿ ರಾಜಕೀಯ ಅಸ್ಥಿರತೆ; ನೇಪಾಳ ಅಧ್ಯಕ್ಷರ ಭಾರತ ಭೇಟಿ ರದ್ದು
ನೇಪಾಳ ದೇಶದಲ್ಲಿ ಎದ್ದಿರುವ ರಾಜಕೀಯ ಅಸ್ಥಿರತೆ ಹಿನ್ನೆಲೆಯಲ್ಲಿ ಅಧ್ಯಕ್ಷೆ ಬಿಂದ್ಯಾ ದೇವಿ ಭಂಡಾರಿ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಇದೇ ಮೇ 9ರಂದು ಭಾರತಕ್ಕೆ  ಆಗಮಿಸಲಿದ್ದ ಬಿಂದ್ಯಾ ದೇವಿ ಭಂಡಾರಿ ಅವರು ಮೇ 14ರಂದು ಉಜ್ಜೈನಿಯ ಸಿಂಹಸ್ಥ ಕುಂಭದಲ್ಲಿ ಶಾಹಿ ಸ್ನಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಪ್ರವಾಸ ರದ್ದಾಗಿರುವುದರಿಂದ  ಅವರ ಈ ಕಾರ್ಯಕ್ರಮ ಕೂಡ ರದ್ದಾಗಿದೆ.

ಇನ್ನು ನೇಪಾಳದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೆರವು ನೀಡಲು ಮುಂದೆ ಬಂದಿದ್ದ ಭಾರತದ ಸಹಾಯವನ್ನು ನೇಪಾಳ ತಿರಸ್ಕರಿಸಿದೆ. ತಿರಸ್ಕಾರದ ಹಿಂದಿನ  ಕಾರಣವನ್ನು ನೇಪಾಳ ಸರ್ಕಾರ ತಿಳಿಸಿಲ್ಲವಾದರೂ, ಈ ಹಿಂದೆ ನೇಪಾಳದಲ್ಲಿ ಮಧೇಸಿ ಸಮುದಾಯ ನಡೆಸಿದ್ದ ಭಾರಿ ಪ್ರತಿಭಟನೆ ವೇಳೆ ಭಾರತದ ನಡೆ ನೇಪಾಳ ಸರ್ಕಾರಕ್ಕೆ ಅಸಮಾಧಾನ  ಉಂಟುಮಾಡಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT