ನೇಪಾಳದಲ್ಲಿರುವ ಭಾರತೀಯ ರಾಯಭಾರಿ ರಂಜಿತ್ ರೇ 
ವಿದೇಶ

ಭಾರತದ ರಾಯಭಾರಿಯನ್ನು ಉಚ್ಛಾಟಿಸುವ ಬಗ್ಗೆ ವರದಿ ತಳ್ಳಿಹಾಕಿದ ನೇಪಾಳ

ನೇಪಾಳದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಛಾಟನೆ ಮಾಡಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ ಎಂಬ ವರದಿಗಳು ಪ್ರಕಟವಾಗಿದೆ. ಆದರೆ ಈ ವರದಿಯನ್ನು ನೇಪಾಳ ಸರ್ಕಾರ ತಿರಸ್ಕರಿಸಿವೆ.

ಕಠ್ಮಂಡು: ಭಾರತದಲ್ಲಿರುವ ನೇಪಾಳ ರಾಯಭಾರಿಯಲ್ಲಿ ವಾಪಸ್ ಕರೆಸಿಕೊ ಳ್ಳಲಾಗಿದೆ ಎಂಬ ವರದಿಗಳ ಬೆನ್ನಲ್ಲೇ, ನೇಪಾಳದಲ್ಲಿರುವ ಭಾರತೀಯ ರಾಯಭಾರಿಯನ್ನು  ಉಚ್ಚಾಟನೆ ಮಾಡಲು ಅಲ್ಲಿನ ಸರ್ಕಾರ ತೀರ್ಮಾನಿಸಿದೆ ಎಂಬ ವರದಿಗಳು ಪ್ರಕಟವಾಗಿದೆ. ಆದರೆ ಈ ವರದಿಯನ್ನು ನೇಪಾಳ ಸರ್ಕಾರ ತಿರಸ್ಕರಿಸಿದ್ದು ಇಂತಹ ಯಾವುದೇ ಚಿಂತನೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ. ರಂಜಿತ್ ರೇ ನೇಪಾಳದಲ್ಲಿರುವ ಭಾರತೀಯ ರಾಯಭಾರಿಯಾಗಿದ್ದು, ನೇಪಾಳದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಬಿಂದ್ಯಾ ಬಂಡಾರಿ ಅವರ ಭಾರತ ಭೇಟಿಯನ್ನು ಮುಂದೂಡಲಾಗಿರುವ ಹಿನ್ನೆಲೆಯಲ್ಲಿ ನೇಪಾಳ ಅಲ್ಲಿನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಯನ್ನು ಉಚ್ಛಾಟಿಸಲು ತೀರ್ಮಾನಿಸಿತ್ತು ಎಂಬ ವರದಿಗಳು ಪ್ರಕಟವಾಗಿತ್ತು.
ರಂಜಿತ್ ರೇ ವಿರುದ್ಧ ರಾಜತಾಂತ್ರಿಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಆರೋಪಗಳು ಕೆಳಿಬಂದಿದ್ದು, ರಂಜಿತ್ ರೇ ಅವರಿಗೆ ನೀಡಲಾಗಿದ್ದ ರಾಜತಾಂತ್ರಿಕ ವಿನಾಯಿತಿಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದಕ್ಕೆ ಪೂರಕವೆಂಬಂತೆ ನೇಪಾಳ ಅಧ್ಯಕ್ಷರಾದ ಬಿದ್ಯಾ ಬಂಡಾರಿ ಅವರ ಭಾರತ ಭೇಟಿಯನ್ನು ತಾತ್ಕಾಲಿಕವಾಗಿ ಮುಂಡೂಡಿದ್ದ ನೇಪಾಳ ಪ್ರಧಾನಿ ಕೆಪಿ ಶರ್ಮಾ ಓಲಿ, ಭಾರತದಲ್ಲಿದ್ದ ನೇಪಾಳ ರಾಯಭಾರಿಯನ್ನು ವಾಪಸ್ ಕರೆಸಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ನೇಪಾಳ ಉಪಪ್ರಧಾನಿ ಹಾಗೂ ವಿದೇಶಾಂಗ ಸಚಿವ ಕಮಲ್ ಥಾಪ, ಭಾರತದ ರಾಯಭಾರಿಯನ್ನು ಉಚ್ಛಾಟಿಸಲು ನೇಪಾಳ ಸರ್ಕಾರ ತೀರ್ಮಾಸಿಸಿದೆ ಎಂಬ ವರದಿಗಳು ಊಹಾಪೋಹವಷ್ಟೇ, ಇಂತಹ ವರದಿಗಳಿಂದ ಭಾರತ- ನೇಪಾಳ ದ್ವಿಪಕ್ಷೀಯ ಸಂಬಂಧಕ್ಕೆ ಅಡ್ಡಿ ಉಂಟಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT