ಜಸ್ಟಿನ್ ಟ್ರುಡೂ 
ವಿದೇಶ

100 ವರ್ಷಗಳ ಹಿಂದಿನ ಘಟನೆಗೆ ಇಂದು ಕ್ಷಮೆಯಾಚಿಸಿದ ಕೆನಡಾ

100 ವರ್ಷಗಳ ಹಿಂದೆ ಭಾರತದಿಂದ ವಲಸೆ ಹೋಗಿದ್ದವರ ಪ್ರವೇಶಕ್ಕೆ ನಿರಾಕರಿಸಿದ್ದಕ್ಕೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೂ...

ಒಟಾವಾ: 100 ವರ್ಷಗಳ ಹಿಂದೆ ಭಾರತದಿಂದ ವಲಸೆ ಹೋಗಿದ್ದವರ ಪ್ರವೇಶಕ್ಕೆ ನಿರಾಕರಿಸಿದ್ದಕ್ಕೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೂ ಕ್ಷಮೆಯಾಚಿಸಿದ್ದಾರೆ.
376 ಸಿಖ್ ಪ್ರಯಾಣಿಕರಿದ್ದ ಕೊಮಗಟ ಹಡಗನ್ನು 1914ರಲ್ಲಿ ಬಲವಂತವಾಗಿ ವಾಪಸ್ ಕಳುಹಿಸಿದಕ್ಕೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೂ ಹೇಳಿದ್ದಾರೆ. 
ಅಂದು ಆಶ್ರಯ ಬಯಸಿ ಬಂದ ಸಿಖ್ ಜನಾಂಗವನ್ನು ವಾಪಸ್ ಕಳುಹಿಸಿ ಅವರನ್ನು ತೊಂದರೆಗೆ ಸಿಲುಕಿಸಿದ ಘಟನೆಯನ್ನು ನಾವು ಮರೆಯಬಾರದು, ಹಾಗೆ ನಾವು ಮರೆಯುವುದಿಲ್ಲ. ಹಾಗಾಗಿ ಅಂದು ವಲಸಿಗರನ್ನು ವಾಪಸ್ ಕಳುಹಿಸಿದಕ್ಕೆ ಇಂದು ಕ್ಷಮೆಯಾಚಿಸಿತ್ತೇನೆ ಎಂದು ಸಂಸತ್ ನಲ್ಲಿ ಅವರು ಹೇಳಿದ್ದಾರೆ. 
ಮಲೇಷ್ಯಾ ಮೂಲದ ಶ್ರೀಮಂತ ಸಿಖ್ ಗುರುದಿತ್ ಸಿಂಗ್ ಎಂಬಾತ ವ್ಯಾಂಕೊವರ್‌ನ ಜನಾಂಗೀಯ ಕಾಯಿದೆ ವಿರೋಧಿಸಿ 376 ಭಾರತೀಯರನ್ನು ಹಾಂಕಾಂಗ್ ಮಾರ್ಗವಾಗಿ ವ್ಯಾಂಕೊವರ್‌ಗೆ ಕರೆದೊಯ್ಯಲು 1914ರಲ್ಲಿ ಜಪಾನ್‌ನ ಕೊಮಗಟ ಹಡಗನ್ನು ಬಾಡಿಗೆ ಪಡೆದಿದ್ದ. ಆದರೆ ವ್ಯಾಂಕೊವರ್ ಬಂದರಿನ ಬಳಿ ಬಂದ ಆ ಹಡಗು ನಿಲುಗಡೆಗೆ ಅವಕಾಶ ನೀಡದೇ, ಎರಡು ತಿಂಗಳು ಕಾಯಿಸಿದ ನಂತರ ಬಲವಂತವಾಗಿ ಭಾರತಕ್ಕೆ ವಾಪಸು ಕಳುಹಿಸಲಾಗಿತ್ತು. 
ಅವರೆಲ್ಲಾ ಕೋಲ್ಕತ್ತಗೆ ಬಂದಿಳಿಯುತ್ತಿದ್ದಂತೆಯೇ ಪೊಲೀಸರು ಗುಂಡು ಹಾರಿಸಿ ಹಲವಾರು ಮಂದಿಯನ್ನು ಹತ್ಯೆ ಮಾಡಿದ್ದರು. ಅಂದು ಹಡಗಿನಲ್ಲಿದ್ದ ಪ್ರಯಾಣಿಕರು ಕೆನಡಾ ಪ್ರವೇಶಕ್ಕೆ 15000 ಡಾಲರ್ ಹಣವನ್ನು ‘ಪ್ರವೇಶ ತೆರಿಗೆ’ ರೂಪದಲ್ಲಿ ಪಾವತಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT