ಸಂಗ್ರಹ ಚಿತ್ರ 
ವಿದೇಶ

ಮತ್ತೆ 5 ಭಾರತೀಯ ರಾಯಭಾರಿಗಳ ಮೇಲೆ ಪಾಕ್ ಬೇಹುಗಾರಿಕೆ ಆರೋಪ

ಭಾರತದ ಮೇಲೆ ದ್ವೇಷ ಸಾಧಿಸಲು ಬಂದಿರು ಪಾಕಿಸ್ತಾನ ಮತ್ತೆ ಐವರು ಭಾರತೀಯ ರಾಯಭಾರಿಗಳ ಮೇಲೆ ಬೇಹುಗಾರಿಕೆ ಆರೋಪವನ್ನು ಮಾಡಿದ್ದು, ದೇಶ ತೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ...

ಇಸ್ಲಾಮಾಬಾದ್: ಭಾರತದ ಮೇಲೆ ದ್ವೇಷ ಸಾಧಿಸಲು ಬಂದಿರು ಪಾಕಿಸ್ತಾನ ಮತ್ತೆ ಐವರು ಭಾರತೀಯ ರಾಯಭಾರಿಗಳ ಮೇಲೆ ಬೇಹುಗಾರಿಕೆ ಆರೋಪವನ್ನು ಮಾಡಿದ್ದು, ದೇಶ ತೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ.

ಭಾರತದ ರಕ್ಷಣಾ ಇಲಾಖೆಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಕೆಲ ದಿನಗಳ ಹಿಂದಷ್ಟೇ ದೆಹಲಿ ಪೊಲೀಸರು ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿದ್ದರು. ಅಲ್ಲದೆ 48 ಗಂಟೆಗಳೊಳಗಾಗಿ ಭಾರತ ತೊರೆಯುವಂತೆ ಆದೇಶಿಸಿತ್ತು. ಇದರ ಬೆನ್ನಲ್ಲೇ ಭಾರತದ ವಿರುದ್ಧ ದ್ವೇಷ ತೀರಿಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ ಭಾರತೀಯ ರಾಯಭಾರಿ ಅಧಿಕಾರಿಗಳ ವಿರುದ್ಧವೂ ಬೇಹುಗಾರಿಕೆ ಆರೋಪ ಮಾಡಲು ಆರಂಭಿಸಿತ್ತು. ಅಲ್ಲದೆ, ಭಾರತೀಯ ಅಧಿಕಾರಿಗಳು 48 ಗಂಟೆಗಳೊಳಗಾಗಿ ಪಾಕಿಸ್ತಾನ ತೊರೆಯುವಂತೆ ತಿಳಿಸಿತ್ತು.

ಇದೀಗ ಮತ್ತೆ ಐವರು ಭಾರತೀಯ ಅಧಿಕಾರಿಗಳ ವಿರುದ್ಧ ಪಾಕಿಸ್ತಾನ ಬೇಹುಗಾರಿಕೆ ಆರೋಪವನ್ನು ಮಾಡುತ್ತಿದ್ದು, ಅಧಿಕಾರಿಗಳ ಹೆಸರುಗಳು ಹಾಗೂ ಅವರ ಮಾಹಿತಿಗಳನ್ನು ಪಾಕಿಸ್ತಾನ ಮಾಧ್ಯಮಗಳು ಬಹಿರಂಗಪಡಿಸುತ್ತಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ.25ರಷ್ಟು ಸುಂಕ: Donald Trump

ಯುದ್ಧಕ್ಕೂ ಸಿದ್ದ-ಮಾತುಕತೆಗೂ ಬದ್ಧ ಎಂದ ಇರಾನ್ ಸರ್ಕಾರ: ಮೃತರ ಸಂಖ್ಯೆ 648ಕ್ಕೆ ಏರಿಕೆ

SSLC ಪೂರ್ವಸಿದ್ಧತಾ ಪರೀಕ್ಷೆ: ಉತ್ತಮ Resultಗಾಗಿ ಶಿಕ್ಷಕರಿಂದಲೇ ಪ್ರಶ್ನೆಪತ್ರಿಕೆ ಲೀಕ್, 6 ಮಂದಿ ಬಂಧನ..!

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

SCROLL FOR NEXT