ಸಂಗ್ರಹ ಚಿತ್ರ 
ವಿದೇಶ

ಮತ್ತೆ 5 ಭಾರತೀಯ ರಾಯಭಾರಿಗಳ ಮೇಲೆ ಪಾಕ್ ಬೇಹುಗಾರಿಕೆ ಆರೋಪ

ಭಾರತದ ಮೇಲೆ ದ್ವೇಷ ಸಾಧಿಸಲು ಬಂದಿರು ಪಾಕಿಸ್ತಾನ ಮತ್ತೆ ಐವರು ಭಾರತೀಯ ರಾಯಭಾರಿಗಳ ಮೇಲೆ ಬೇಹುಗಾರಿಕೆ ಆರೋಪವನ್ನು ಮಾಡಿದ್ದು, ದೇಶ ತೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ...

ಇಸ್ಲಾಮಾಬಾದ್: ಭಾರತದ ಮೇಲೆ ದ್ವೇಷ ಸಾಧಿಸಲು ಬಂದಿರು ಪಾಕಿಸ್ತಾನ ಮತ್ತೆ ಐವರು ಭಾರತೀಯ ರಾಯಭಾರಿಗಳ ಮೇಲೆ ಬೇಹುಗಾರಿಕೆ ಆರೋಪವನ್ನು ಮಾಡಿದ್ದು, ದೇಶ ತೊರೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಗುರುವಾರ ತಿಳಿದುಬಂದಿದೆ.

ಭಾರತದ ರಕ್ಷಣಾ ಇಲಾಖೆಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡುತ್ತಿದ್ದಾರೆಂದು ಹೇಳಿ ಕೆಲ ದಿನಗಳ ಹಿಂದಷ್ಟೇ ದೆಹಲಿ ಪೊಲೀಸರು ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಬಂಧನಕ್ಕೊಳಪಡಿಸಿ ವಿಚಾರಣೆ ನಡೆಸಿದ್ದರು. ಅಲ್ಲದೆ 48 ಗಂಟೆಗಳೊಳಗಾಗಿ ಭಾರತ ತೊರೆಯುವಂತೆ ಆದೇಶಿಸಿತ್ತು. ಇದರ ಬೆನ್ನಲ್ಲೇ ಭಾರತದ ವಿರುದ್ಧ ದ್ವೇಷ ತೀರಿಸಿಕೊಳ್ಳಲು ಮುಂದಾಗಿದ್ದ ಪಾಕಿಸ್ತಾನ ಭಾರತೀಯ ರಾಯಭಾರಿ ಅಧಿಕಾರಿಗಳ ವಿರುದ್ಧವೂ ಬೇಹುಗಾರಿಕೆ ಆರೋಪ ಮಾಡಲು ಆರಂಭಿಸಿತ್ತು. ಅಲ್ಲದೆ, ಭಾರತೀಯ ಅಧಿಕಾರಿಗಳು 48 ಗಂಟೆಗಳೊಳಗಾಗಿ ಪಾಕಿಸ್ತಾನ ತೊರೆಯುವಂತೆ ತಿಳಿಸಿತ್ತು.

ಇದೀಗ ಮತ್ತೆ ಐವರು ಭಾರತೀಯ ಅಧಿಕಾರಿಗಳ ವಿರುದ್ಧ ಪಾಕಿಸ್ತಾನ ಬೇಹುಗಾರಿಕೆ ಆರೋಪವನ್ನು ಮಾಡುತ್ತಿದ್ದು, ಅಧಿಕಾರಿಗಳ ಹೆಸರುಗಳು ಹಾಗೂ ಅವರ ಮಾಹಿತಿಗಳನ್ನು ಪಾಕಿಸ್ತಾನ ಮಾಧ್ಯಮಗಳು ಬಹಿರಂಗಪಡಿಸುತ್ತಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT