ಪ್ರಧಾನಮಂತ್ರಿ ನರೇಂದ್ರ ಮೋದಿ 
ವಿದೇಶ

ದುಬಾರಿ ಬೆಲೆ ನೋಟಿನ ಮೇಲೆ ನಿಷೇಧ: ಪ್ರಧಾನಿ ಮೋದಿ ನಡೆಗೆ ಐಎಂಎಫ್ ಬೆಂಬಲ

ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕಠಿಣ ನಿರ್ಧಾರ ತೆಗೆದುಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಡೆಗೆ ವಿಶ್ವ ಹಣಕಾಸು ನಿಧಿ...

ವಾಷಿಂಗ್ಟನ್: ರು.500 ಹಾಗೂ 1,000 ಮುಖಬೆಲೆಯ ನೋಟಿನ ಮೇಲೆ ನಿಷೇಧ ಹೇರುವ ಮೂಲಕ ಕಠಿಣ ನಿರ್ಧಾರ ತೆಗೆದುಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಡೆಗೆ ವಿಶ್ವ ಹಣಕಾಸು ನಿಧಿ ಶುಕ್ರವಾರ ಬೆಂಬಲವನ್ನು ಸೂಚಿಸಿದೆ.

ದುಬಾರಿ ಬೆಲೆಯ ನೋಟಿನ ಮೇಲೆ ಪ್ರಧಾನಿ ಮೋದಿಯವರು ನಿಷೇಧ ಹೇರಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿಶ್ವ ಹಣಕಾಸು ನಿಧಿ ವಕ್ತಾರ ಗೆರ್ರಿ ರೈಸ್ ಅವರು, ಭಾರತದಲ್ಲಿರುವ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ಸಂಗ್ರಹದ ವಿರುದ್ಧ ಪ್ರಧಾನಿ ಮೋದಿಯವರು ತೆಗೆದುಕೊಂಡಿರುವ ನಿರ್ಧಾರವನ್ನು ವಿಶ್ವ ಸಮುದಾಯ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರ ಈ ಕಠಿಣ ನಿರ್ಧಾರದಿಂದಾಗಿ ಸಾರ್ವಜನಿಕರು ಅನುಭವಿಸುತ್ತಿರುವ ಸಂಕಷ್ಟದ ಕುರಿತಂತೆ ಮಾತನಾಡಿರುವ ಅವರು, ಭಾರತದ ಆರ್ಥಿಕತೆಯಲ್ಲಿ ದಿನನಿತ್ಯ ಜೀವನದಲ್ಲಿ ದೊಡ್ಡ ಪ್ರಮಾಣದಲ್ಲಿ ಹಣಕಾಸು ವ್ಯವಹಾರಗಳು ನಡೆಯುತ್ತಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಮಯೋಚಿತವಾಗಿ ನಿರ್ಧಾರಕೈಗೊಳ್ಳಬೇಕಿತ್ತು ಎಂದು ತಿಳಿಸಿದ್ದಾರೆ.

ಕಠಿಣ ನಿರ್ಧಾರದಿಂದಾಗಿ ಜನರು ಪಡುತ್ತಿರುವ ಕಷ್ಟದ ಕುರಿತಂತೆ ನಿನ್ನೆಯಷ್ಟೇ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿಯವರು, ಕಠಿಣ ನಿರ್ಧಾರದಿಂದ ಸಂಕಷ್ಟ ಎದುರಾಗಿದ್ದು, ಮುಂದೆ ಒಳ್ಳೆಯ ದಿನಗಳು ಬರುವುದೆಂದು ಜನರು ಕಷ್ಟವನ್ನು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಜನರ ಪ್ರೀತಿ, ಉತ್ಸಾಹ ಹಾಗೂ ತಾಳ್ಮೆಯನ್ನು ನೋಡುತ್ತಿದ್ದರೆ ಹೃದಯ ತುಂಬಿ ಬರುತ್ತಿದೆ. ಭಾರತವನ್ನು ಭ್ರಷ್ಟಾಚಾರ ಮುಕ್ತ ರಾಷ್ಟ್ರವಾಗಿಸುಲು ನಮ್ಮ ಶ್ರಮವನ್ನು ಮುಂದುವರೆಸಲಾಗುತ್ತದೆ. ದೇಶದ ಅಭಿವೃದ್ಧಿ ಪ್ರತಿಯೊಬ್ಬ ನಾಗರೀಕರನಿಗೂ ತಲುಪುವಂತೆ ಮಾಡಲಾಗುತ್ತದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT