ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ 
ವಿದೇಶ

ಜನಾಂಗೀಯ ಭೇದದಿಂದಾಗಿ ಡೊನಾಲ್ಡ್ ಟ್ರಂಪ್ ಗೆಲವು ಸಾಧಿಸಿದ್ದಾರೆ: ಉಗ್ರ ಹಫೀಜ್ ಸಯೀದ್

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಡೆದ ಜನಾಂಗೀಯ ಭೇಧ ಹಾಗೂ ನಿರ್ಲಕ್ಷ್ಯತನದಿಂದಾಗಿ ಡೊನಾಲ್ಡ್ ಟ್ರಂಪ್ ಅವರು ಗೆಲವು ಸಾಧಿಸಿದ್ದಾರೆಂದು ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್...

ಇಸ್ಲಾಮಾಬಾದ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಡೆದ ಜನಾಂಗೀಯ ಭೇಧ ಹಾಗೂ ನಿರ್ಲಕ್ಷ್ಯತನದಿಂದಾಗಿ ಡೊನಾಲ್ಡ್ ಟ್ರಂಪ್ ಅವರು ಗೆಲವು ಸಾಧಿಸಿದ್ದಾರೆಂದು ಜಮಾತ್ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಶನಿವಾರ ಹೇಳಿದ್ದಾರೆ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಅಮೆರಿಕದಲ್ಲಿ ಇಂದು ಜ್ಞಾನ, ವಿವೇಕ, ತಿಳುವಳಿಕೆ ಮತ್ತು ಸಹಿಷ್ಣುತೆಗಳು ಸೋಲನ್ನು ಕಂಡಿದೆ. ಜನಾಂಗೀಯ ಭೇದ ಹಾಗೂ ನಿರ್ಲಕ್ಷ್ಯತನ ಗೆಲವು ಸಾಧಿಸಿದೆ. ದೇವರು ಟ್ರಂಪ್ ಅಧಿಕಾರದ ಮೂಲಕ ಅಮೆರಿಕ ರಾಷ್ಟ್ರವನ್ನು ಆಂತರಿಕ ಸಮಸ್ಯೆಗಳ ಒಳಗೆ ಸಿಕ್ಕಿಹಾಕಿಕೊಳ್ಳುವಂತೆ ಮಾಡಿದ್ದಾನೆಂದು ಹೇಳಿಕೊಂಡಿದ್ದಾರೆ.

ಟ್ರಂಪ್ ಅಧ್ಯಕ್ಷತೆಯ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ವಿಶ್ವಕ್ಕೆ ಅಮೆರಿಕ ರಾಷ್ಟ್ರ ಅನ್ಯಾಯವನ್ನು ಮಾಡಿದೆ. ಮುಸ್ಲಿಮರನ್ನು ಹತ್ಯೆ ಮಾಡಿ, ಅನಾಗರೀಕತೆ ಪಸರುವಂತೆ ಮಾಡಿದೆ. ಇದೀಗ ಅಮೆರಿಕನ್ನರಿಗೆ ಅಲ್ಲಾ ಶಿಕ್ಷೆ ನೀಡಲು ನಿರ್ಧರಿಸಿದ್ದಾನೆ. ಅಮೆರಿಕ ರಾಷ್ಟ್ರದ ನಿಜವಾದ ಮುಖ ಇದೀಗ ಬಯಲಾಗಲಿದೆ. ಈ ಸಮಯದಲ್ಲಿ ಮುಸ್ಲಿಂ ರಾಷ್ಟ್ರಗಳು ಒಗ್ಗೂಡಿ ತಮ್ಮ ಶಕ್ತಿಯನ್ನ ಹೆಚ್ಚಿಸಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಕಾಶ್ಮೀರ ಮತ್ತು ಪ್ಯಾಲೆಸ್ಟೈನ್ ಸಮಸ್ಯೆ ಪರಿಹಾರಕ್ಕಾಗಿ ನಾವು ನಮ್ಮ ಕಾಲಿನ ಮೇಲೆ ನಿಲ್ಲಬೇಕಿದೆ. ಅಮೆರಿಕ ತನ್ನ ಹಿಡಿತವನ್ನು ಕಳೆದುಕೊಳ್ಳಲಿದೆ. ಅಸಮಾಧಾನವನ್ನು ಹೊರಹಾಕುವ ಬದಲು ಆ ದೇವರ ಸಹಾಯಕ್ಕಾಗಿ ಮೊರೆ ಹೋಗಬೇಕಿದೆ.

ಅಮೆರಿಕ ದೇಶದಲ್ಲಿ ದೊಡ್ಡ ಬದಲಾವಣೆಗಳು ಕಂಡು ಬರಲಿದ್ದು, ಇಸ್ಲಾಂ ಹಾಗೂ ಮುಸ್ಲಿಮರಿಗೆ ಧನಾತ್ಮಕ ಸಂದೇಶ ರವಾನೆಯಾಗಲಿದೆ. ಅಮೆರಿಕ ಅತ್ಯಂತ ನಿರ್ಲಕ್ಷ್ಯ ರಾಷ್ಟ್ರವಾಗಿದೆ ಎಂಬುದು ಅಲ್ಲಿನ ಅಧ್ಯಕ್ಷೀಯ ಚುನಾವಣೆಯಿಂದ ಬಹಿರಂಗವಾಗಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT