ಪಾಕಿಸ್ತಾನ ಸೇನೆ (ಸಂಗ್ರಹ ಚಿತ್ರ) 
ವಿದೇಶ

ಭಾರತದ ಗಡಿಯಲ್ಲಿ ಸಮರಾಭ್ಯಾಸ: ಪರೋಕ್ಷವಾಗಿ ಪ್ರಚೋದನೆ ನೀಡುತ್ತಿರುವ ಪಾಕ್ ಸೇನೆ

ಭಾರತೀಯ ಸೇನೆಯನ್ನು ಕೆರಳಿಸುವ ಕೆಲಸಗಳನ್ನು ಮಾಡಿ, ನಂತರ ಏನೂ ತಿಳಿಯದಂತೆ ನಟಿಸುವ ಪಾಕಿಸ್ತಾನ ಸೇನೆಯ ಮತ್ತೊಂದು ಮುಖವಾಡ ಬಯಲಾಗಿದ್ದು, ಭಾರತದ ಗಡಿಯಲ್ಲಿ ಸಮಾರಾಭ್ಯಾಸವನ್ನು ನಡೆಸಿ ಪರೋಕ್ಷವಾಗಿ ಭಾರತೀಯ ಸೇನೆಗೆ...

ನವದೆಹಲಿ: ಭಾರತೀಯ ಸೇನೆಯನ್ನು ಕೆರಳಿಸುವ ಕೆಲಸಗಳನ್ನು ಮಾಡಿ, ನಂತರ ಏನೂ ತಿಳಿಯದಂತೆ ನಟಿಸುವ ಪಾಕಿಸ್ತಾನ ಸೇನೆಯ ಮತ್ತೊಂದು ಮುಖವಾಡ ಬಯಲಾಗಿದ್ದು, ಭಾರತದ ಗಡಿಯಲ್ಲಿ ಸಮಾರಾಭ್ಯಾಸವನ್ನು ನಡೆಸಿ ಪರೋಕ್ಷವಾಗಿ ಭಾರತೀಯ ಸೇನೆಗೆ ಪ್ರಚೋದನೆ ನೀಡುವ ಕೆಲಸಗಳನ್ನ ಮಾಡುತ್ತಿದೆ.

ಪಂಜಾಬ್ ಪ್ರಾಂತ್ಯದ ಭಾರತೀಯ ಗಡಿ ಭವಲ್ಪುರ್ ನ ಖೈರ್ಪುರ್ ತಮೇವಾಲಿ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ತನ್ನ ಸಮರಾಭ್ಯಾಸ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಹಾಗೂ ಪಾಕಿಸ್ತಾನ ಸೇನಾ ಮುಖ್ಯಸ್ಥ ರಹೀಲ್ ಷರೀಫ್ ಅವರು ಸೇನಾ ಪಡೆ ಮತ್ತು ವಾಯುಪಡೆಗಳ ಈ ಸಮರಾಭ್ಯಾಸವನ್ನು ವೀಕ್ಷಿಸಿದ್ದಾರೆಂದು ವರದಿಗಳು ತಿಳಿಸಿವೆ.

ಗಡಿಯಲ್ಲಿ ಪಾಕಿಸ್ತಾನದ ಸೇನಾ ಪಡೆ ಹಾಗೂ ವಾಯುಪಡೆಗಳು ಯುದ್ಧ ಹೆಲಿಕಾಪ್ಟರ್ ಗಳೊಂದಿಗೆ ಸಮಾರಾಭ್ಯಾಸವನ್ನು ನಡೆಸುತ್ತಿವೆ ಎಂದು ತಿಳಿದುಬಂದಿದೆ.

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನ ಸೇನೆಗೆ ಇತ್ತೀಚೆಗಷ್ಟೇ ದಿಟ್ಟ ಉತ್ತರವನ್ನು ನೀಡಿತ್ತು. ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದ 7 ಪಾಕಿಸ್ತಾನ ಸೈನಿಕರನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪಾಕಿಸ್ತಾನ ಸೇನೆ ಭಾರತದ ಗಡಿಯಲ್ಲಿ ಸಮರಾಭ್ಯಾಸ ನಡೆಸುತ್ತಿರುವುದು ಮಹತ್ವವನ್ನು ಪಡೆದುಕೊಂಡಿದೆ.

ಪಾಕಿಸ್ತಾನ ಸೈನಿಕರ ಹತ್ಯೆ ಕುರಿತಂತೆ ಈ ಹಿಂದೆ ಹೇಳಿಕೆ ನೀಡಿದ್ದ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಪ್ ಅವರು, ಭಾರತದ ತಂತ್ರಗಳಿಗೆ ಪಾಕಿಸ್ತಾನ ಎಂದಿಗೂ ಬಗ್ಗುವುದಿಲ್ಲ. ನಮ್ಮ ತಾಳ್ಮೆಯನ್ನು ದೌರ್ಬಲವ್ಯವೆಂದು ಪರಿಗಣಿಸಬಾರದು. ಯಾವುದೇ ರೀತಿಯ ಆಕ್ರಮಣಗಳು ನಡೆದರೂ ಅದನ್ನು ಎದುರಿಸಲು ಪಾಕಿಸ್ತಾನ ಸದಾ ಸಿದ್ಧವಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT