ರಾಹೀಲ್ ಷರೀಫ್ 
ವಿದೇಶ

ಪಾಕ್ ಸೀಮಿತ ದಾಳಿ ನಡೆಸಿದರೆ ಭಾರತವು ಅನೇಕ ಪೀಳಿಗೆಯವರೆಗೆ ಮರೆಯಲ್ಲ: ರಾಹೀಲ್ ಷರೀಫ್

ಪಾಕಿಸ್ತಾನ ಸೀಮಿತ ದಾಳಿ ನಡೆಸಿದರೆ ಭಾರತವು ಅನೇಕ ಪೀಳಿಗೆಯವರೆಗೆ ಅದನ್ನು ಮರೆಯುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ರಾಹೀಲ್ ಷರೀಫ್...

ಇಸ್ಲಾಮಾಬಾದ್: ಪಾಕಿಸ್ತಾನ ಸೀಮಿತ ದಾಳಿ ನಡೆಸಿದರೆ ಭಾರತವು ಅನೇಕ ಪೀಳಿಗೆಯವರೆಗೆ ಅದನ್ನು ಮರೆಯುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ರಾಹೀಲ್ ಷರೀಫ್ ಸಮಾರಂಭವೊಂದರಲ್ಲಿ ಹೇಳಿದ್ದಾರೆ. 
ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಉಭಯ ದೇಶಗಳು ಯೋಧರು ನಡುವೆ ದಿನಂಪ್ರತಿ ಗುಂಡಿನ ಚಕಮಕಿ ನಡೆಯುತ್ತಲೇ ಇದ್ದು ಈ ನಡುವೆ ಪಾಕಿಸ್ತಾನ ಮಿಲಿಟರಿ ಪಡೆ ಭಾರತದ ವಿರುದ್ಧ ಮಾತಿನ ದಾಳಿ ನಡೆಸಿವೆ. ಸರ್ಜಿಕಲ್ ದಾಳಿ ಅಂದರೆ ಹೇಗಿರುತ್ತದೆ ಎಂಬುದನ್ನು ಭಾರತವು ಮುಂದಿನ ಪೀಳಿಗೆಯ ಪಠ್ಯದಲ್ಲಿ ಅಳವಡಿಸುತ್ತದೆ ಎಂದು ಷರೀಫ್ ಹೇಳಿದ್ದಾರೆ. 
ಮತ್ತೊಂದು ಸಮಾರಂಭದಲ್ಲಿ ಮಾತನಾಡಿದ ಪಾಕಿಸ್ತಾನ ವಾಯುಪಡೆ ಮುಖ್ಯಸ್ಥ ಸೊಹೇಲ್ ಅಮಾನ್ ಭಾರತದ ಬೆದರಿಕೆಗಳ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳುವುದಿಲ್ಲ. ಆ ದೇಶ ಆಕ್ರಮಣಕಾರಿ ವರ್ತನೆ ತೋರಿದರೆ ತಿರುಗೇಟು ನೀಡುವ ಸಾಮರ್ಥ್ಯ ನಮಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT