ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ 
ವಿದೇಶ

ಕಾಶ್ಮೀರ ಹೊರತಾಗಿಸಿ ಭಾರತದೊಂದಿಗೆ ಮಾತುಕತೆ ಸಾಧ್ಯವಿಲ್ಲ: ಸರ್ತಾಜ್ ಅಜೀಜ್

ಕಾಶ್ಮೀರದ ವಿಚಾರವನ್ನು ಸೇರ್ಪಡೆಗೊಳಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್...

ಇಸ್ಲಾಮಾಬಾದ್: ಕಾಶ್ಮೀರದ ವಿಚಾರವನ್ನು ಸೇರ್ಪಡೆಗೊಳಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ಸಲಹೆಗಾರ ಸರ್ತಾಜ್ ಅಜೀಜ್ ಅವರು ಹೇಳಿದ್ದಾರೆ.

ಈ ಕುರಿತಂತೆ ಪಾಕಿಸ್ತಾನ ಸಂಸತ್ತಿನಲ್ಲಿ ಮಾತನಾಡಿರುವ ಅವರು, ದೇಶದ ಗಡಿ, ನೀರು, ಹಾಗೂ ಭೂಮಿಯ ವಿಚಾರ ಸಂಬಂಧ ನೆರೆ ರಾಷ್ಟ್ರ ಯಾವುದೇ ರೀತಿಯಿಂದ ದಾಳಿ ನಡೆಸಿದರೂ ಅದನ್ನು ಎದುರಿಸಲು ಪಾಕಿಸ್ತಾನ ಸೈನಿಕರು ಸಮರ್ಥರಾಗಿದ್ದಾರೆ. ಆದರೆ, ಭಾರತದ ಆಕ್ರಮಣಶೀಲ ದಾಳಿಗೆ ಪಾಕಿಸ್ತಾನ ಎಂದಿಗೂ ಪ್ರತೀಕಾರ ತೀರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸದಾ ಸಿದ್ಧವಿದ್ದು, ಕಾಶ್ಮೀರ ವಿಚಾರವನ್ನು ಮಾತುಕತೆಯಲ್ಲಿ ಸೇರ್ಪಡೆಗೊಳಿಸಿದರೆ ಮಾತ್ರ ಪಾಕಿಸ್ತಾನ ಮಾತುಕತೆಗೆ ಮುಂದಾಗುತ್ತದೆ ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದು, ಕಾಶ್ಮೀರ ವಿಚಾರ ಸಂಬಂಧ ವಿಶ್ವದ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನವಾಜ್ ಷರೀಫ್ ಅವರು ಕಾಶ್ಮೀರ ವಿಚಾರವನ್ನು ವಿಶ್ವ ಸಮುದಾಯದ ಮುಂದೆ ಪ್ರಸ್ತಾಪ ಮಾಡಿದಾಗ ಕಾಶ್ಮೀರ ವಿಚಾರ ವಿಶ್ವದ ಗಮನವನ್ನು ಸೆಳೆದಿದೆ. ಕಾಶ್ಮೀರದ ವಿಚಾರ ಸ್ಥಳೀಯ ಸ್ವಾತಂತ್ರ್ಯ ಚಳುವಳಿಯಾಗಿದ್ದು, ರಾಜಕೀಯವಾಗಿ, ರಾಜತಾಂತ್ರಿಕವಾಗಿ ಹಾಗೂ ಕಾಶ್ಮೀರಿಗರ ನೈತಿಕ ಬೆಂಬಲದ ಮೂಲಕ ನಾನು ಈ ಹೋರಾಟವನ್ನು ಮುಂದುವರೆಸುತ್ತೇವೆ ಎಂದಿದ್ದಾರೆ. ಅಲ್ಲದೆ, ಕಾಶ್ಮೀರ ಹಾಗೂ ಗಡಿ ನಿಯಂತ್ರಣ ರೇಖೆ ವಿಚಾರಗಳ ಸಂಬಂಧ ರಾಜಕೀಯ ಮಾಡುವುದನ್ನು ರಾಜಕೀಯ ಪಕ್ಷಗಳು ಬಿಡಬೇಕು ಎಂದಿರುವ ಅವರು, ಪ್ರತಿಪಕ್ಷಗಳ ಟೀಕೆಗಳು ವಿಶ್ವಕ್ಕೆ ತಪ್ಪು ಸಂದೇಶವನ್ನು ರವಾನೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT