ನಿಯೋಗದ ಸದಸ್ಯರೊಂದಿಗೆ ರಾಜನಾಥ್ ಸಿಂಗ್ 
ವಿದೇಶ

ಕ್ಯಾಸ್ಟ್ರೋ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕ್ಯೂಬಾಗೆ ತೆರಳಿದ ರಾಜನಾಥ್ ಸಿಂಗ್ ನೇತೃತ್ವದ ನಿಯೋಗ

ಕೆಲವು ದಿನಗಳ ಹಿಂದೆ ನಿಧನರಾದ ಕ್ಯೂಬಾದ ಮಾಜಿ ಅಧ್ಯಕ್ಷ, ಪ್ರಧಾನಿ ಫಿಡೆಲ್ ಕ್ಯಾಸ್ಟ್ರೋ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಭಾರತೀಯ ನಿಯೋಗ ಕ್ಯೂಬಾಗೆ ತೆರಳಿದೆ.

ಹವಾನ: ಕೆಲವು ದಿನಗಳ ಹಿಂದೆ ನಿಧನರಾದ ಕ್ಯೂಬಾದ ಮಾಜಿ ಅಧ್ಯಕ್ಷ, ಪ್ರಧಾನಿ ಫಿಡೆಲ್ ಕ್ಯಾಸ್ಟ್ರೋ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಭಾರತೀಯ ನಿಯೋಗ ಕ್ಯೂಬಾಗೆ ತೆರಳಿದೆ. 
ಎಡಪಕ್ಷಗಳೂ ಸೇರಿದಂತೆ ವಿವಿಧ ಪಕ್ಷಗಳ ಒಟ್ಟು 8 ಮುಖಂಡರು ರಾಜನಾಥ್ ಸಿಂಗ್ ನೇತೃತ್ವದ ನಿಯೋಗದಲ್ಲಿ ಕ್ಯೂಬಾಗೆ ತೆರಳಿದ್ದಾರೆ.  ಲೋಕಸಭೆಯ ಉಪಸಭಾಪತಿ ಎಂ ತಂಬಿದುರೈ, ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಸಿಪಿಐ ಕಾರ್ಯದರ್ಶಿ ಡಿ ರಾಜ, ಬಿಜೆಡಿ ಸಂಸದ ಜಿನಾ ಹಿಕಾಕ, ಸಮಾಜವಾದಿ ಪಕ್ಷದ ಸಂಸದ ಜಾವೇದ್ ಅಲಿ ಖಾನ್ ರಾಜನಾಥ್ ಸಿಂಗ್ ಅವರೊಂದಿಗೆ ತೆರಳಿದ್ದಾರೆ. 
ಕ್ಯೂಬಾದ ರಾಜಧಾನಿ ಹವಾನದಲ್ಲಿ ಅಂತ್ಯಕ್ರಿಯೆ ನಡೆದ ಬಳಿಕ ಕ್ಯಾಸ್ಟ್ರೋ ಅವರ ಚಿತಾಭಸ್ಮ ನಾಲ್ಕು ದಿನಗಳ ಕಾಲ ದ್ವೀಪರಾಷ್ಟ್ರದಾದ್ಯಂತ ಸಂಚರಿಸಲಿದೆ ಎಂದು ತಿಳಿದುಬಂದಿದೆ. 90 ವರ್ಷದ ಕ್ಯಾಸ್ಟ್ರೋ ನ.25 ರಂದು ನಿಧನರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT