ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾನಟೋಸ್ 
ವಿದೇಶ

ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾನಟೋಸ್ ಗೆ ನೊಬೆಲ್ ಶಾಂತಿ ಪ್ರಶಸ್ತಿ

ಕೊಲಂಬಿಯಾದ ಸರ್ಕಾರ ಮತ್ತು ಎಫ್ಎಆರ್ ಸಿ ಬಂಡಾಯ ಗುಂಪಿನ ನಡುವೆ ಶಾಂತಿ ನೆಲೆಸಲು ಪ್ರಮುಖ ಕಾರಣವಾಗಿದ್ದ ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾಂಟೋಸ್ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಓಸ್ಲೋ: ಕೊಲಂಬಿಯಾದ ಸರ್ಕಾರ ಮತ್ತು ಎಫ್ಎಆರ್ ಸಿ ಬಂಡಾಯ ಗುಂಪಿನ ನಡುವೆ ಶಾಂತಿ ನೆಲೆಸಲು ಪ್ರಮುಖ ಕಾರಣವಾಗಿದ್ದ ಕೊಲಂಬಿಯಾ ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾಂಟೋಸ್ ನೊಬೆಲ್ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಾರ್ವೆಯ ನೊಬೆಲ್ ಶಾಂತಿ ಪ್ರಶಸ್ತಿ ಆಯ್ಕೆ ಸಮಿತಿ 2016 ನೇ ಸಾಲಿನ ನೊಬೆಲ್ ಪ್ರಶಸ್ತಿಯನ್ನು ಅಂತಿಮಗೊಳಿಸಿದ್ದು, ಕಳೆದ 50 ವರ್ಷಗಳಿಂದ ಕೊಲಂಬಿಯಾ ಸರ್ಕಾರ ಮತ್ತು ಎಫ್ಎಆರ್ ಸಿ ನಡುವೆ ನಡೆಯುತ್ತಿದ್ದ ನಾಗರಿಕ ಯುದ್ಧವನ್ನು ಅಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದ  ಅಧ್ಯಕ್ಷ ಜುವಾನ್ ಮ್ಯಾನುಯೆಲ್ ಸ್ಯಾಂಟೋಸ್ ಗೆ ಪ್ರಶಸ್ತಿಯನ್ನು ಘೋಷಿಸಿದೆ. ಕಳೆದ 50 ವರ್ಷ ನಡೆದ ಯುದ್ಧದಲ್ಲಿ 220,000 ಕೊಲಂಬಿಯನ್ನರು ಮೃತಪಟ್ಟಿದ್ದರು. ಅಷ್ಟೇ ಅಲ್ಲದೆ 6 ಮಿಲಿಯನ್ ಕೊಲಂಬಿಯನ್ನರು ಮೂಲ ಪ್ರದೇಶದಿಂದ ಸ್ಥಳಾಂತರಗೊಂಡಿದ್ದರು.  ಕ್ಯೂಬಾದಲ್ಲಿ 2012 ರಲ್ಲಿ ಪ್ರಾರಂಭವಾಗಿದ್ದ ಮಾತುಕತೆಯ ಭಾಗವಾಗಿ ಶಾಂತಿಯುತ ಒಪ್ಪಂದಕ್ಕೆ ಸಹಿಹಾಕುವ ಪ್ರಸ್ತಾವನೆಗೆ ಶೇ.52 ರಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದರು.

ಸೆ.26 ರಂದು ಕೊಲಂಬಿಯಾ ಹಾಗೂ ಎಫ್ಎಆರ್ ಸಿ ನಡುವೆ ಐತಿಹಾಸಿಕ ಶಾಂತಿಯುತ ಒಪ್ಪಂದ ನಡೆದಿತ್ತು. ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿ 376 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದರು. ಈ ಪೈಕಿ 228 ವ್ಯಕ್ತಿಗಳು ಹಾಗೂ 148 ಸಂಸ್ಥೆಗಳಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಪರೇಷನ್ ಟೈಗರ್' ಸಕ್ಸಸ್: ಶಿಂಧೆ ಸಮ್ಮುಖದಲ್ಲಿ ಶಿವಸೇನೆ ಸೇರಿದ ಉದ್ಧವ್ ಸೇನೆಯ ಆರು ಸಂಸದರು; ವಿಭಜನೆ ಅಧಿಕೃತ!

ಭೀಮಾತೀರದಲ್ಲಿ 6 ಮಂದಿ ಹತ್ಯೆ ಕೇಸ್: ಪರಾರಿಯಾಗಲು ಯತ್ನಿಸಿದ ಕಿಂಗ್‌ಪಿನ್ ಕಾಲಿಗೆ ಗುಂಡು!

Cross-voting: ದುಡ್ಡು ಕೊಟ್ಟು ಕರೆತಂದ ಕಾಂಗ್ರೆಸ್‌ ಶಾಸಕರಿಂದಲೇ BJP ಹಾಳಾಯ್ತು; ಈಶ್ವರಪ್ಪ ಸ್ಫೋಟಕ ಹೇಳಿಕೆ

Cross-voting: ಬಿಜೆಪಿಗೆ ಬಿಗ್ ಶಾಕ್ ನೀಡಿದ ಸದಾನಂದಗೌಡ; ‘ಪ್ರೆಸ್ಟೀಜ್ ಅಪಾರ್ಟ್‌ಮೆಂಟ್’ ಸಭೆಯ ರಹಸ್ಯ ಬಯಲು!

ವಿರಾಟ್ ಕೊಹ್ಲಿ IPL ನಲ್ಲಿ ಇನ್ನೂ ಎಷ್ಟು ವರ್ಷ ಆಡಲಿದ್ದಾರೆ? ನಿವೃತ್ತಿ ಯಾವಾಗ? ಬಿಗ್ ಅಪ್ ಡೇಟ್ ಕೊಟ್ಟ RCB ಸಿಇಒ!