ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ 
ವಿದೇಶ

ಕಾಶ್ಮೀರದ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಮಾತುಕತೆಗೆ ಪಾಕ್ ಸಿದ್ಧ: ನವಾಜ್ ಷರೀಫ್

ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್...

ಬಕು: ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿದ್ದೇ ಆದರೆ, ಭಾರತದೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ.

ಅಜರ್ಬೈಜಾನ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತದೊಂದಿಗಿರುವ ಕಾಶ್ಮೀರ ಹಾಗೂ ಇನ್ನಿತರೆ ಸಮಸ್ಯೆಗಳ ಕುರಿತಂತೆ ಮಾತುಕತೆ ನಡೆಸಲು ಪಾಕಿಸ್ತಾನ ಸಿದ್ಧವಿದೆ. ಈ ಬಗ್ಗೆ ಮಾತುಕತೆ ನಡೆಸಲು ಭಾರತವನ್ನು ಆಹ್ವಾನಿಸಿತ್ತು. ಆದರೆ, ಸಮಸ್ಯೆ ಬಗ್ಗೆ ಮಾತನಾಡಲು ಭಾರತವೇ ಸಿದ್ಧವಿಲ್ಲ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಸಾಕಷ್ಟು ಸಮಸ್ಯೆಗಳು ತಲೆದೋರಿವೆ. ಹಿಂಸಾಚಾರಗಳು ತೀವ್ರಗೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಆದರೂ, ಕಾಶ್ಮೀರ ವಿಚಾರವನ್ನು ಭಾರತ ಗಂಭೀರವಾಗಿ ಪರಿಗಣಿಸಿ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕಿದೆ ಎಂದಿದ್ದಾರೆ.

ಇದೇ ವೇಳೆ ಉರಿ ಸೆಕ್ಟರ್ ಸೇನಾ ಪ್ರಧಾನ ಕಚೇರಿ ಮೇಲೆ ನಡೆದ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತ ಇಲ್ಲಸಲ್ಲದ ಆರೋಪಗಳನ್ನು ಪಾಕಿಸ್ತಾನದ ಮೇಲೆ ಮಾಡುತ್ತಿದೆ. ದಾಳಿ ಪ್ರಕರಣವನ್ನು ತನಿಖೆ ನಡೆಸದೆಯೇ ಇಸ್ಲಾಮಾಬಾದ್ ಮೇಲೆ ಆರೋಪಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT