ಥೆರೆಸಾ 
ವಿದೇಶ

ಕಾಶ್ಮೀರ ವಿಷಯವನ್ನು ಭಾರತ ಮತ್ತು ಪಾಕಿಸ್ತಾನವೇ ಬಗೆಹರಿಸಿಕೊಳ್ಳಬೇಕು: ಬ್ರಿಟನ್

ಕಾಶ್ಮೀರದ ವಿಷಯದಲ್ಲಿ ಬ್ರಿಟನ್ ನಿಲುವು ಬದಲಾಗುವುದಿಲ್ಲ. ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು...

ಲಂಡನ್: ಕಾಶ್ಮೀರದ ವಿಷಯದಲ್ಲಿ ಬ್ರಿಟನ್ ನಿಲುವು ಬದಲಾಗುವುದಿಲ್ಲ. ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಬ್ರಿಟನ್ ಪ್ರಧಾನ ಮಂತ್ರಿ ಥೆರೆಸಾ ಹೇಳಿದ್ದಾರೆ.

ಲಂಡನ್ ನ ಹೌಸ್ ಆಫ್ ಕಾಮನ್ ನಲ್ಲಿ ಪ್ರಧಾನ ಮಂತ್ರಿಗಳ ಪ್ರಶ್ನೋತ್ತರ ವೇಳೆಯಲ್ಲಿ ಸಂಸದ ಯಾಸ್ಮೀನ್ ಖುರೇಶಿ ಕಾಶ್ಮೀರ ಸಮಸ್ಯೆ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದ ಥೆರೆಸಾ, ಕಾಶ್ಮೀರ ಸಮಸ್ಯೆಯನ್ನು ಎರಡು ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದು, ಆ ವೇಳೆ ಈ ವಿಷಯವಾಗಿ ಚರ್ಚಿಸುವುದಾಗಿ ಹೇಳಿದ್ದಾರೆ.

ನವೆಂಬರ್ 6 ರಿಂದ 8 ರವರೆಗೆ ಭಾರತ ಪ್ರವಾಸದ ವೇಳೆ ದ್ವಿಪಕ್ಷೀಯ ಮಾತುಕತೆಯ ಸಂದರ್ಭದಲ್ಲಿ ಈ ವಿಷಯವನ್ನು ಕಾಶ್ಮೀರ ವಿಷವನ್ನು ಅಜೆಂಡವಾಗಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ  ಆಯೋಜಿಸಿರುವ ಭಾರತ- ಯುಕೆ ತಂತ್ರಜ್ಞಾನ ಶೃಂಗ ಸಭೆಯನ್ನು ಉದ್ಘಾಟಿಸಲು ತಾವು ತೆರಳುತ್ತಿದ್ದು, ಭಾರತದಿಂದ ತೆರಳುವ ಮುನ್ನ ಪ್ರದಾನಿ ಮೋದಿ ಜೊತೆ ಕಾಶ್ಮೀರ ವಿಷಯ ಸಂಬಂಧ ಸಮಾಲೋಚಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಥೆರೆಸಾ ತಮ್ಮ ಜೊತೆ ಲಂಡನ್ ನ್ ಅಂತಾರಾಷ್ಟ್ರೀಯ ವ್ಯಾಪಾರ ವ್ಯವಹಾರಗಳ ಸಚಿವರ ನಿಯೋಗವನ್ನು ಭಾರತಕ್ಕೆ ಕರೆದೊಯ್ಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನರಕ ಸೃಷ್ಟಿಸುತ್ತೇವೆ: ಅಮೆರಿಕಾ ಬೆದರಿಕೆಗೆ ಕ್ಯಾರೆ ಎನ್ನದ ಇರಾನ್; ಇಸ್ರೇಲ್-ಕುವೈತ್ ಮೇಲೆ ಕ್ಷಿಪಣಿ-ಡ್ರೋನ್ ದಾಳಿ..!

“ನಮ್ಮನ್ನು ಕೆಣಕದಿರಿ”...: ಕೋಲ್ಕತಾ ಹೆಸರೆತ್ತಿ ಭಾರತಕ್ಕೆ ಪಾಕ್ ಬೆದರಿಕೆ, ಪದೇ ಪದೇ ಯುದ್ಧೋತ್ಸಾಹದ ಮಾತು..!

Uniform Civil Code: ಇದು ಸಂವಿಧಾನ ಉಲ್ಲಂಘನೆ, ಮುಸ್ಲಿಮರ ಮೇಲೆ ಹಿಂದೂ ಕಾಯ್ದೆ ಹೇರಿಕೆ ಒಪ್ಪಲ್ಲ; ಅಸಾದುದ್ದೀನ್ ಓವೈಸಿ

ಮಡಿಕೇರಿ: 3 ದಿನಗಳಾದರೂ ಪತ್ತೆಯಾಗದ ಟ್ರೆಕ್ಕಿಂಗ್ ಗೆ ತೆರಳಿದ್ದ ಕೇರಳದ ಯುವತಿ, ANF ನಿಂದ ತೀವ್ರ ಹುಡುಕಾಟ

ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ರಕ್ಷಿಸಿದರೆ, ಮೋದಿ ಸರ್ಕಾರ ಜನರ ಜೇಬು ಕತ್ತರಿಸುತ್ತಿದೆ: ರಂದೀಪ್ ಸಿಂಗ್ ಸುರ್ಜೆವಾಲಾ

SCROLL FOR NEXT