ಟರ್ಕಿ ಆಂತರಿಕ ಕಲಹ (ಸಂಗ್ರಹ ಚಿತ್ರ) 
ವಿದೇಶ

ತಾರಕಕ್ಕೇರಿದ ಟರ್ಕಿ ಆಂತರಿಕ ಕಲಹ; 1 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ವಜಾ!

ಟರ್ಕಿ ಆಂತರಿಕ ಕಲಹ ತಾರಕಕ್ಕೇರಿದ್ದು, ಅಧ್ಯಕ್ಷ ಟಯ್ಯೀಪ್ ಎರ್ಡೋಗನ್ ಅವರ ಪ್ರಮುಖ ಎದುರಾಳಿ ಎಂದು ಬಿಂಬಿಸಲಾಗುತ್ತಿರುವ ಪಾದ್ರಿ ಫತೇಉಲ್ಲಾ ಗುಲೆನ್ ಪರ ಪ್ರಚಾರ ಮಾಡಿದರು ಎಂಬ ಆರೋಪದ ಮೇರೆಗೆ ಸ್ಥಳೀಯ ಸರ್ಕಾರ ಬರೊಬ್ಬರಿ 1 ಲಕ್ಷಕ್ಕೂ ಅಧಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

ಇಸ್ತಾನ್ ಬುಲ್: ಟರ್ಕಿ ಆಂತರಿಕ ಕಲಹ ತಾರಕಕ್ಕೇರಿದ್ದು, ಅಧ್ಯಕ್ಷ ಟಯ್ಯೀಪ್ ಎರ್ಡೋಗನ್ ಅವರ ಪ್ರಮುಖ ಎದುರಾಳಿ ಎಂದು ಬಿಂಬಿಸಲಾಗುತ್ತಿರುವ ಪಾದ್ರಿ ಫತೇಉಲ್ಲಾ ಗುಲೆನ್ ಪರ ಪ್ರಚಾರ  ಮಾಡಿದರು ಎಂಬ ಆರೋಪದ ಮೇರೆಗೆ ಸ್ಥಳೀಯ ಸರ್ಕಾರ ಬರೊಬ್ಬರಿ 1 ಲಕ್ಷಕ್ಕೂ ಅಧಿಕ ನೌಕರರನ್ನು ಸೇವೆಯಿಂದ ವಜಾಗೊಳಿಸಿದೆ.

ಕೇವಲ ಇದು ಮಾತ್ರವಲ್ಲದೇ ಸರ್ಕಾರದ ವಿರುದ್ಧ ಸುದ್ದಿ ಪ್ರಸಾರ ಮಾಡಿದ ಸುಮಾರು 15 ಮಾಧ್ಯಮ ಸಂಸ್ಥೆಗಳಿಗೆ ಬೀಗ ಜಡಿಯಲಾಗಿದೆ. ಟರ್ಕಿ ಇದೀಗ ಆಂತರಿಕ ಕಲಹದ ಬೇಗುದಿಯಲ್ಲಿ  ಬೇಯುತ್ತಿದ್ದು, ಸರ್ಕಾರಿ ವಿರೋಧಿ ಮನೋಭಾವದಿಂದ ಇರುವ ಸುಮಾರು 37 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಪ್ರಮುಖ ಮಾಧ್ಯಮ ಸಂಸ್ಥೆಗಳ  ಸಂಪಾದಕರು, ಪತ್ರಕರ್ತರೂ ಹಾಗೂ ಲೇಖಕರು, ಶಿಕ್ಷಕರು ಸೇರಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ಲಕ್ಷಾಂತರ ಶಿಕ್ಷಕರು, ಲೇಖಕರು, ಸಾಮಾಜಿಕ ಕಾರ್ಯಕರ್ತರನ್ನು ಗೃಹಬಂಧನದಲ್ಲಿ  ಇರಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಗುಲೆನ್ ಪರ ಅಭಿಪ್ರಾಯಗಳನ್ನು ಹೊಂದಿರುವ ಸರ್ಕಾರಿ ಲ್ಯಾಬ್ ಗಳ ವಿಜ್ಞಾನಿಗಳು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯಗಳ ತಜ್ಞರನ್ನು  ವಜಾ ಮಾಡಲಾಗಿದ್ದು, ಎಲ್ಲರೂ ಇದೀಗ ಎರ್ಡೋಗನ್ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಟರ್ಕಿ ಅಕ್ಷರಶಃ ಆಂತರಿಕ ತುರ್ತು ಪರಿಸ್ಥಿತಿ ಎದುರಿಸುತ್ತಿದ್ದು,  ಸರ್ಕಾರದ ವಿರುದ್ಧ ವಿಮರ್ಶೆಗಳನ್ನು ಮಾಡುವವರೆಲ್ಲರನ್ನೂ ಬಂಧಿಸಲಾಗುತ್ತಿದೆ.

ಸರ್ಕಾರದ ಈ ಟೀಕಾರ್ಹ ನಡೆಯಿಂದಾಗಿ ಟರ್ಕಿಯಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದ್ದು, ಅರಾಜಕತೆ ತಾಂಡವವಾಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT