ಭಾರತದಲ್ಲಿರುವ ತನ್ನ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ಪಾಕ್ ಚಿಂತನೆ 
ವಿದೇಶ

ಭಾರತದಲ್ಲಿರುವ ತನ್ನ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ಪಾಕ್ ಚಿಂತನೆ

ಪಾಕಿಸ್ತಾನದ ಓರ್ವ ರಾಯಭಾರಿ ಅಧಿಕಾರಿಯನ್ನು ಅಂಗೀಕರಿಸಲು ಭಾರತ ನಿರಾಕರಿಸಿರುವ ಬೆನ್ನಲ್ಲೇ, ಭಾರತದಲ್ಲಿರುವ ತನ್ನ ನಾಲ್ವರು ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ಪಾಕಿಸ್ತಾನ ಚಿಂತನೆ.

ಇಸ್ಲಾಮಾಬಾದ್: ಪಾಕಿಸ್ತಾನದ ಓರ್ವ ರಾಯಭಾರಿ ಅಧಿಕಾರಿಯನ್ನು ಅಂಗೀಕರಿಸಲು ಭಾರತ ನಿರಾಕರಿಸಿರುವ ಬೆನ್ನಲ್ಲೇ, ಭಾರತದಲ್ಲಿರುವ ತನ್ನ ನಾಲ್ವರು ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಲು ಪಾಕಿಸ್ತಾನ ಚಿಂತನೆ ನಡೆಸುತ್ತಿದೆ.

ಇದು ಕೇವಲ ಪ್ರಸ್ತಾಪವಾಗಿದ್ದು, ಶೀಘ್ರವೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಅಧಿಕಾರಿಗಳು ಹೇಳಿದ್ದಾರೆ. ವಾಣಿಜ್ಯ ವಿಭಾಗದ ವಿದೇಶಾಂಗ ಅಧಿಕಾರಿ ಸಯೀದ್ ಫುರ್ಕ್ ಹಬೀಬ್ ಹಾಗು ಖಾದಿಮ್ ಹುಸೇನ್, ಮುದಸ್ಸಿರ್ ಚೀಮಾ ಹಾಗು ಶಾಹಿದ್ ಇಕ್ಬಾಲ್ ಅವರನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಪಾಕಿಸ್ತಾನ ಯೋಚಿಸುತ್ತಿದೆ ಎಂದು ಹೇಳಲಾಗುತ್ತಿದೆ.

ಇದಕ್ಕೂ ಮುನ್ನ ಭಾರತ ಸರ್ಕಾರ ಪಾಕ್ ಹೈಕಮಿಷನರ್ ನ ಅಧಿಕಾರಿ ಮೆಹಮೂದ್ ಅಕ್ತರ್ ನನ್ನ ಉಚ್ಛಾಟಿಸಿ ಅಂಗೀಕರಿಸಲು ಸಿದ್ಧವಿಲ್ಲ ಎಂಬ ಮಾತನ್ನು ಹೇಳಿತ್ತು. ಪಾಕಿಸ್ತಾನದ ಅಧಿಕಾರಿಗಳು ಭಾರತದ ರಕ್ಷಣಾ ವಿವರಗಳ ಬಗ್ಗೆ ಬೇಹುಗಾರಿಕೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದ್ದು, ಪಾಕ್ ಸಂಚನ್ನು ಬಯಲುಗೊಳಿಸುವಂತಹ ಹೇಳಿಕೆ ನೀಡಿದ್ದ ಪಾಕ್ ಅಧಿಕಾರಿ ಮೆಹಮೂದ್ ಅಕ್ತರ್ ಈಗ ಉಲ್ಟಾ ಹೊಡೆದಿದ್ದಾರೆ.

ನನ್ನನ್ನು ಬಂಧಿಸಿದ ನಂತರ ಬಲವಂತದಿಂದ ಪಾಕ್ ವಿರುದ್ಧದ ಹೇಳಿಕೆಯನ್ನು ಪಡೆಯಲಾಗಿದೆ. ಒತ್ತಡದಲ್ಲಿ ಹೇಳಿಕೆ ನೀಡಿರುವುದಾಗಿ ಮೆಹಮೂದ್ ಅಕ್ತರ್ ತಿಳಿಸಿದ್ದಾರೆ. ಅಕ್ತರ್ ನೀಡಿದ್ದ ಹೇಳಿಕೆಯಲ್ಲಿ ಪಾಕ್ ಹೈಕಮಿಷನರ್ ನ 4 ಅಧಿಕಾರಿಗಳು  ಪಾಕ್ ನ ಗುಪ್ತಚರ ಸಂಸ್ಥೆ ಐಎಸ್ಐ ಗೆ ಸಂಬಂಧಿಸಿದವರು ಎಂದು ಮೆಹಮೂದ್ ಅಕ್ತರ್ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮೆಹಮೂದ್ ಅಕ್ತರ್ ಪಾಕ್ ಹೈಕಮಿಷನರ್ ಅಧಿಕಾರಿಯನ್ನು ಉಚ್ಚಾಟಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT