ನೊಬೆಲ್ ಪುರಸ್ಕೃತೆ ಮದರ್ ತೆರೇಸಾ 
ವಿದೇಶ

ವ್ಯಾಟಿಕನ್'ನಲ್ಲಿಂದು ಮದರ್ ತೆರೆಸಾಗೆ ಸಂತ ಪದವಿ

ತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್ ಪುರಸ್ಕೃತೆ ಮದರ್ ತೆರೇಸಾ ಅವರಿಗೆ...

ವ್ಯಾಟಿಕನ್ ಸಿಟಿ: ತಮ್ಮ ಜೀವಿತಾವಧಿಯನ್ನು ಜನರ ಸೇವೆಗಾಗಿಯೇ ಮುಡಿಪಾಗಿಟ್ಟು, ನೊಂದವರು ಹಾಗೂ ದೀನ ದಲಿತರ ತಾಯಿ ಎಂದೇ ಖ್ಯಾತಿ ಗಳಿಸಿದ್ದ ನೊಬೆಲ್ ಪುರಸ್ಕೃತೆ ಮದರ್ ತೆರೇಸಾ ಅವರಿಗೆ ಸಂತ ಪದವಿ ಪ್ರಧಾನ ಸಮಾರಂಭ ಭಾನುವಾರ ವ್ಯಾಟಿಕನ್ ಸಿಟಿಯಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ವಿಶ್ವದಾದ್ಯಂತ ಸುಮಾರು 1 ಲಕ್ಷ ಜನರ ಸಮ್ಮುಖದಲ್ಲಿ ರೋಮನ್ ಕ್ಯಾಥೋಲಿಕ್ ಚರ್ಚ್ ನ ಪೋರ್ ಫ್ರಾನ್ಸಿಸ್ ಅವರು ತೆರೆಸಾಗೆ ಸಂತ ಪದವಿ ಪ್ರಧಾನ ಮಾಡಲಿದ್ದಾರೆ. ಸಮಾರಂಭದಲ್ಲಿ ತೆರೆಸಾ ಅವರನ್ನು ಹೊಸ ಸಂತ ಎಂದು ಘೋಷಿಸಲಿದ್ದಾರೆ.

ಭಾರತವನ್ನು ಪ್ರತಿನಿಧಿಸಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದ 12 ಮಂದಿಯ ನಿಯೋಗ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಎರಡು ರಾಜ್ಯ ಸರ್ಕಾರಗಳ ನಿಯೋಗವು ಈಗಾಗಲೇ ವ್ಯಾಟಿಕನ್ ತಲುಪಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಯಾಗಲಿವೆ.

ಕೋಲ್ಕತಾದ ಬೀದಿ ಬೀದಿಗಳಲ್ಲಿ 45 ವರ್ಷಗಳ ಕಾಲ ಬಡಲವರು ಮತ್ತು ರೋಗಿಗಳ ಸೇವೆ ಮಾಡುತ್ತಾ ಬಂದ ಥೆರೇಸಾ ಅವರ 2 ಪವಾಡಗಳು ಸಾಬೀತಾದ ಕಾರಣ ಅವರನ್ನು ಸಂತರೆಂದು ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಕೋಲ್ಕತಾದಲ್ಲಿ ಸಂಭ್ರಮ ಮನೆಮಾಡಿದೆ. ಸಮಾರಂಧಲ್ಲಿ ಸಾಮೂಹಿಕ ಪ್ರಾರ್ಥನೆಗಳು ಸೇರಿದಂತೆ ಇನ್ನಿತರೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT