ಸಾಂದರ್ಭಿಕ ಚಿತ್ರ 
ವಿದೇಶ

ಪಾಕಿಸ್ತಾನದಲ್ಲಿ ಎರಡು ರೈಲುಗಳು ಢಿಕ್ಕಿ: ಆರು ಮಂದಿ ಸಾವು, 150 ಜನಕ್ಕೆ ಗಾಯ

ಕರಾಚಿ ಮೂಲದ ಅವಮ್ ಎಕ್ಸ್ ಪ್ರೆಸ್ ರೈಲು ಮುಲ್ತಾನ ಸಮೀಪ ಸರಕು ರೈಲಿಗೆ ಢಿಕ್ಕಿ...

ಇಸ್ಲಾಮಾಬಾದ್: ಕರಾಚಿ ಮೂಲದ ಅವಮ್ ಎಕ್ಸ್ ಪ್ರೆಸ್ ರೈಲು ಮುಲ್ತಾನ ಸಮೀಪ ಸರಕು ರೈಲಿಗೆ ಢಿಕ್ಕಿ ಹೊಡೆದು ಕನಿಷ್ಠ ಆರು ಮಂದಿ ಮೃತಪಟ್ಟು 150ಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಗಾಯಗೊಂಡವರಲ್ಲಿ 10 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಗಾಡಿಯ ಒಳಗೆ ಸಿಕ್ಕಿಹಾಕಿಕೊಂಡ ಮೂವರನ್ನು ರಕ್ಷಿಸಲಾಗಿದೆ ಎಂದು ರಕ್ಷಣಾ ಪಡೆಗಳು ತಿಳಿಸಿವೆ.

ಶೇರ್ ಶಾಹ್ ಪ್ರದೇಶದಲ್ಲಿ ಬುಚ್ಚ ರೈಲ್ವೆ ನಿಲ್ದಾಣದ ಸಮೀಪ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಅವಮ್ ಎಕ್ಸ್ ಪ್ರೆಸ್ ನ 4 ಬೋಗಿಗಳು ಉರುಳಿಬಿದ್ದಿವೆ. ಢಿಕ್ಕಿ ಸಂಭವಿಸಿದ್ದರಿಂದ ರೈಲಿನ ಎಂಜಿನ್ ಮತ್ತು ವಿದ್ಯುತ್ ವಾಹಕಗಳು ಧ್ವಂಸಗೊಂಡಿದ್ದು, 4 ಬೋಗಿಗಳು ಉರುಳಿಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಭಾರೀ ಕತ್ತಲು ಇರುವುದರಿಂದ ಮತ್ತು ಈದ್ ಹಬ್ಬದ ಪ್ರಯುಕ್ತ ಅನೇಕ ರಕ್ಷಣಾ ಕೆಲಸಗಾರರು ರಜೆ ಮೇಲೆ ತೆರಳಿದ್ದರಿಂದ ಆರಂಭದಲ್ಲಿ ರಕ್ಷಣಾ ಕಾರ್ಯ ವಿಳಂಬಗತಿಯಲ್ಲಿ ಸಾಗಿತ್ತು.

 ಅವಮ್ ರೈಲು ಪೇಶಾವರದಿಂದ ಕರಾಚಿಗೆ ತೆರಳುತ್ತಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT