ನರೇಂದ್ರ ಮೋದಿ 
ವಿದೇಶ

ಬಲೂಚ್ ಪರ ಪ್ರಧಾನಿ ಮೋದಿ ಧ್ವನಿಗೆ ಕಂಗೆಟ್ಟ ಪಾಕ್

ಬಲೂಚಿಗರ ಮೇಲೆ ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಅಮಾನುಷ ದೌರ್ಜನ್ಯವೆಸಗಿ ಮಾನವ ಹಕ್ಕಗಳ ಸಾರಾ ಸಗಟು ಉಲ್ಲಂಘನೆ ಮಾಡುತ್ತಿರುವ ವಿಷಯ...

ನವದೆಹಲಿ: ಬಲೂಚಿಗರ ಮೇಲೆ ಪಾಕಿಸ್ತಾನ ಸರ್ಕಾರ ಮತ್ತು ಸೇನೆ ಅಮಾನುಷ ದೌರ್ಜನ್ಯವೆಸಗಿ ಮಾನವ ಹಕ್ಕಗಳ ಸಾರಾ ಸಗಟು ಉಲ್ಲಂಘನೆ ಮಾಡುತ್ತಿರುವ ವಿಷಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಧ್ವನಿಯೆತ್ತಿದ್ದರಿಂದ ಪಾಕಿಸ್ತಾನ ತೀವ್ರವಾಗಿ ಕಂಗೆಟ್ಟಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಬಲೂಚ್ ಪ್ರತಿನಿಧಿಯಾಗಿರುವ ಮೆಹರಾನ್ ಮರ್ರಿ ಹೇಳಿದ್ದಾರೆ.

ದೆಹಲಿಯ ಕೆಂಪು ಕೋಟೆಯ ಮೇಲೆ ಸ್ವಾತಂತ್ರ್ಯ ದಿನದ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಬಲೂಚಿಸ್ಥಾನದಲ್ಲಿ ಪಾಕಿಸ್ತಾನ ನಡೆಸುತ್ತಿರುವ ಮಾನವ ಹಕ್ಕುಗಳ ಸಾರಾ ಸಗಟು ಉಲ್ಲಂಘನೆಯ ಬಗ್ಗೆ ವಿಶ್ವದ ಗಮನವನ್ನು ಸೆಳೆಯುತ್ತಿದ್ದು ಇದರಿಂದಾಗಿ ಪಾಕ್ ಸರ್ಕಾರ ತೀವ್ರವಾಗಿ ಕಂಗೆಟ್ಟಿದ್ದು ಬಲೂಚಿಸ್ಥಾನದಲ್ಲಿ ಕಳೆದ ಕೆಲವು ವಾರಗಳಿಂದ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬಲೂಚಿಗರ ಅಪಹರಿಸಿ, ದಾಳಿ ಎಸಗುತ್ತಿದೆ ಎಂದು ಮರ್ರಿ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಎರಡು ದಿನಗಳ ಹಿಂದೆ ಮತ್ತೊಮ್ಮೆ ಬಲೂಚಿಸ್ಥಾನದ ವಿಷಯವನ್ನು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಸಭೆಯಲ್ಲಿ ಎತ್ತಿರುವುದಕ್ಕೆ ನಾವು ಭಾರತಕ್ಕೆ ತುಂಬಾ ಕೃತಜ್ಞರಾಗಿದ್ದೇವೆ ಎಂದು ಮೆಹರಾನ್ ಮರ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT