ಕಾಶ್ಮೀರವನ್ನು 'ಉರಿ'ಸಿದ್ದ ಪಾಕಿಸ್ತಾನಕ್ಕೆ ಮರ್ಮಾಘಾತ: ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ! 
ವಿದೇಶ

ಉರಿ ಉಗ್ರ ದಾಳಿ: ಪಾಕಿಸ್ತಾನಕ್ಕೆ ಮರ್ಮಾಘಾತ, ಜಂಟಿ ಸೇನಾ ತಾಲೀಮು ರದ್ದುಗೊಳಿಸಿದ ರಷ್ಯಾ!

ಸೇನಾ ಕಚೇರಿ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ಈ ಹಿಂದೆಯೇ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.

ಮಾಸ್ಕೊ: ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಪಾಕಿಸ್ತಾನ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ಈ ಹಿಂದೆಯೇ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ಏಕಾಏಕಿ ರದ್ದುಗೊಳಿಸಿದೆ.

ಪಾಕಿಸ್ತಾನದೊಂದಿಗಿನ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸುವ ಮೂಲಕ ರಷ್ಯಾ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ನೀಡಿರುವುದು ಸ್ಪಷ್ಟವಾಗಿದ್ದು, ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರ ಮೂಲಕ ಪರೋಕ್ಷ ಯುದ್ಧ ನಡೆಸುತ್ತಿರುವ ಪಾಕಿಸ್ತಾನಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.

ರಷ್ಯಾದ ನಡೆ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಭದಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೆ.24 ರಿಂದ ಅಕ್ಟೊಬರ್ 7 ವರೆಗೆ ರಷ್ಯಾ- ಪಾಕಿಸ್ತಾನ ಪಾಕಿಸ್ತಾನದ ಉತ್ತರ ಭಾಗದಲ್ಲಿರುವ ಪ್ರದೇಶವೊಂದರಲ್ಲಿ ಜಂಟಿ ಸೇನಾ ತಾಲೀಮು ನಡೆಸುವುದು ನಿಗದಿಯಾಗಿತ್ತು. ಕೆಲವೇ ದಿನಗಳ ಹಿಂದೆ ಪಾಕಿಸ್ತಾನದೊಂದಿಗಿನ ಜಂಟಿ ತಾಲೀಮಿನ ಬಗ್ಗೆ ಸ್ಪಷ್ಟನೆ ನೀಡಿದ್ದ ರಷ್ಯಾ, ಭಾರತ ಇದರಿಂದ ಆತಂಕ ಪಡಬೇಕಿಲ್ಲ ಎಂದು ಹೇಳಿತ್ತು. ಆದರೆ ರಷ್ಯಾ ಸ್ಪಷ್ಟನೆ ನೀಡಿದ ಒಂದೆರಡು ದಿನಗಳಲ್ಲಿ ಪಾಕಿಸ್ತಾನ ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಪ್ರಧಾನ ಕಚೇರಿ ಮೇಲೆ ಭಯೋತ್ಪಾದಕರ ಮೂಲಕ ದಾಳಿ ನಡೆಸಿ 18 ಯೋಧರ ಸಾವಿಗೆ ಕಾರಣವಾಗಿತ್ತು. ದಾಳಿ ನಡೆದ ಎರಡು ದಿನಗಳಲ್ಲಿ ರಷ್ಯಾ ಪಾಕ್ ನೊಂದಿಗೆ ನಡೆಯಬೇಕಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಲ್.ಕೆ ಅಡ್ವಾಣಿ ಹೊಗಳಿದ ಶಶಿ ತರೂರ್; ಅಂತರ ಕಾಯ್ದುಕೊಂಡ ಕಾಂಗ್ರೆಸ್

Bihar Polls 2025: ಯಾರಿಗೆ ಬಿಹಾರ? ಮತ್ತೆ ಮಹಿಳಾ ಮತದಾರರು ನಿರ್ಧರಿಸಲಿದ್ದಾರೆಯೇ?

RSS ದೇಣಿಗೆ ಕುರಿತು ಮೋಹನ್ ಭಾಗವತ್ ಗೆ 11 ಪ್ರಶ್ನೆ ಕೇಳಿದ ಸಚಿವ ಪ್ರಿಯಾಂಕ್ ಖರ್ಗೆ

Ironman Challenge: ಅಣ್ಣಾಮಲೈ ಭಾಗಿ; ಸತತ 2ನೇ ಬಾರಿಗೆ ಸಂಸದ ಸೂರ್ಯ ಐರನ್‌ಮ್ಯಾನ್ ಸಾಧನೆ!

ಕೂಡ್ಲಿಗಿ: ಏಳನೇ 'ಗ್ಯಾರಂಟಿ'ಯಾಗಿ ಕೆರೆಗಳಿಗೆ ನೀರು! ಡಿಸಿಎಂ ಡಿ.ಕೆ ಶಿವಕುಮಾರ್

SCROLL FOR NEXT