ಸಾಂದರ್ಭಿಕ ಚಿತ್ರ 
ವಿದೇಶ

ಬಲೋಚಿಯನ್ನರ ಪರ ಪ್ರಧಾನಿ ಮೋದಿ ಒಲವು; ಪಾಕ್ ದೌರ್ಜನ್ಯಕ್ಕೆ ಯುರೋಪಿಯನ್ ಒಕ್ಕೂಟ ಎಚ್ಚರಿಕೆ

ಬಲೋಚಿಸ್ತಾನ ವಿಷಯಕ್ಕೆ ಸಂಬಂಧಪಟ್ಟಂತೆ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ಪ್ರಧಾನ ಮಂತ್ರಿ...

ಜಿನಿವಾ: ಬಲೋಚಿಸ್ತಾನ ವಿಷಯಕ್ಕೆ ಸಂಬಂಧಪಟ್ಟಂತೆ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಡೆಸುತ್ತಿರುವ ಪ್ರಯತ್ನಕ್ಕೆ ಉತ್ತಮ ಫಲ ಸಿಗುವ ಲಕ್ಷಣ ಕಾಣುತ್ತಿದೆ.
ಪ್ರಮುಖ ಬೆಳವಣಿಗೆಯೊಂದರಲ್ಲಿ ಯುರೋಪಿಯನ್ ಸಂಸತ್ತಿನ ಉಪಾಧ್ಯಕ್ಷ ರೈಸ್ಜಾರ್ದ್ ಕ್ಸರ್ಲೆಕಿ, ಬಲೋಚಿಸ್ತಾನ ವಿವಾದಕ್ಕೆ ಸಂಬಂಧಪಟ್ಟಂತೆ ಪಾಕಿಸ್ತಾನಕ್ಕೆ ಪ್ರಬಲ ಸಂದೇಶ ಕಳುಹಿಸಿದ್ದಾರೆ.
ಬಲೋಚಿಸ್ತಾನದಲ್ಲಿ ಮೃತಪಟ್ಟವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಬಲೋಚಿಸ್ತಾನದ ಜನರ ಮೇಲೆ ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ತಾನದ ಮೇಲೆ ಆರ್ಥಿಕ ಮತ್ತು ರಾಜಕೀಯ ನಿರ್ಬಂಧ ಹೇರುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನ್ಯೂಯಾರ್ಕ್ ಸಿಟಿಯ ಕಚೇರಿಯಲ್ಲಿ ಮೊನ್ನೆ ಬುಧವಾರ ಬಲೋಚಿಯನ್ನರು ಮತ್ತು ಭಾರತೀಯರು ಪಾಕಿಸ್ತಾನ ವಿರುದ್ಧ ಪ್ರತಿಭಟನೆ ನಡೆಸಿದ ಬಳಿಕ ಯುರೋಪಿಯನ್ ಒಕ್ಕೂಟದ ಹೇಳಿಕೆ ಬಂದಿದೆ.
ಬಲೋಚಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಲ್ಲೇಖಿಸಿದ ನಂತರ ಗಡಿಪಾರುಗೊಂಡು ಬದುಕುತ್ತಿರುವ ಅನೇಕ ಬಲೋಚ್ ನಾಯಕರು, ಪಾಕಿಸ್ತಾನದ ಬಂಧನದಿಂದ ಮುಕ್ತವಾಗಿ ಸ್ವತಂತ್ರವಾಗಿ ಬದುಕಲು ಹುರುಪು ಮತ್ತು ಉತ್ಸಾಹದಿಂದ ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT