ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿರುವ ಚೀನಾ ಕಂಪನಿಗಳು, ನೆರೆ ರಾಷ್ಟ್ರಕ್ಕೆ ಉದ್ಯೋಗ ಕಡಿತದ ಆತಂಕ! 
ವಿದೇಶ

ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸುತ್ತಿರುವ ಚೀನಾ ಕಂಪನಿಗಳು, ನೆರೆ ರಾಷ್ಟ್ರಕ್ಕೆ ಉದ್ಯೋಗ ಕಡಿತದ ಆತಂಕ!

ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ, ಚೀನಾ ಸಂಸ್ಥೆಗಳು ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಬೀಜಿಂಗ್: ಚೀನಾದ ಪ್ರಮುಖ ಟೆಲಿಕಾಂ ಸಂಸ್ಥೆ ಹುವಾಯಿ ಭಾರತದಲ್ಲಿ ಉತ್ಪಾದನಾ ಘಟಕ ಪ್ರಾರಂಭಿಸಿರುವುದರ ಬಗ್ಗೆ ವರದಿ ಪ್ರಕಟಿಸಿರುವ ಚೀನಾದ ಸರ್ಕಾರಿ ಸ್ವಾಮ್ಯದ ಮಾಧ್ಯಮ, ಚೀನಾ ಸಂಸ್ಥೆಗಳು ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದೆ.

ಚೀನಾ ಕಂಪನಿಗಳು ಉತ್ಪಾದನಾ ಘಟಕವನ್ನು ಭಾರತಕ್ಕೆ ವರ್ಗಾಯಿಸುತ್ತಿರುವುದರಿಂದ ಚೀನಾದಲ್ಲಿ ಉದ್ಯೋಗ ಕಡಿತದ ಸಮಸ್ಯೆ ಎದುರಾಗಲಿದೆ ಎಂದು ಚೀನಾ ಮಾಧ್ಯಮ ಗ್ಲೋಬಲ್ ಟೈಮ್ಸ್ ಆತಂಕ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ಚೀನಾ ಕಂಪನಿಗಳು ಭಾರತದಲ್ಲಿ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲು ಆಸಕ್ತಿ ತೋರುತ್ತಿದ್ದು, ಭಾರತ- ಚೀನಾ ನಡುವಿನ ಆರ್ಥಿಕ ಪೈಪೋಟಿ ಮತ್ತಷ್ಟು ಹೆಚ್ಚಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ಹುವಾಯಿ ಭಾರತದಲ್ಲಿ ಉತ್ಪಾದನಾ ಘಟಕ ಪ್ರಾರಂಭಿಸುವುದರ ಪರಿಣಾಮ ಚೀನಾದಲ್ಲಿ ಉದ್ಯೋಗ ಕಡಿತವಾಗಲಿದೆ, ಇದನ್ನೂ ಚೀನಾ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗ್ಲೋಬಲ್ ಟೈಮ್ಸ್  ಹೇಳಿದೆ. ಭಾರತದಲ್ಲಿನ ಸ್ಥಿರ ಸರ್ಕಾರ, ಸ್ಥಿರ ಬೆಳವಣಿಗೆ, ಕಡಿಮೆ ಕಾರ್ಮಿಕ ವೆಚ್ಚ ಹಲವು ಅಂತಾರಾಷ್ಟ್ರೀಯ ಹೂಡಿಕೆದಾರರನ್ನು ಆಕರ್ಷಿಸಿದೆ. ಭಾರತದಲ್ಲಿ ಹೂಡಿಕೆ ಮಾಡುವುದಕ್ಕೂ ಮುನ್ನ ಚೀನಾದ ಸಂಸ್ಥೆಗಳು ಅಲ್ಲಿನ ಕಾರ್ಮಿಕ ಕಾನೂನು ಹಾಗೂ ಭಾರತ ಸಂಸ್ಥೆಗಳ ಬಗ್ಗೆ ಅರಿತುಕೊಳ್ಳುವುದು ಒಳಿತು ಎಂದು ಗ್ಲೋಬಲ್ ಟೈಮ್ಸ್ ಚೀನಾ ಸಂಸ್ಥೆಗಳಿಗೆ ಸಲಹೆ ನೀಡಿದೆ.  ಚೀನಾ ಸಂಸ್ಥೆಗಳು ಭಾರತಕ್ಕೆ ಹೋಗುವುದರಿಂದ ಉಂಟಾಗುವ ಪರಿಣಾಮಗಳನ್ನು ಅಂಕಿಅಂಶಗಳ ಸಹಿತ ವಿವರಿಸಿರುವ ಚೀನಾದ ಮಾಧ್ಯಮ ಕಳೆದ ವರ್ಷ ಭಾರತದಲ್ಲಿ ಚೀನಾದ ನೇರ ಬಂಡವಾಳ ಹೂಡಿಕೆ 870 ಮಿಲಿಯನ್ ಡಾಲರ್ ನಷ್ಟಾಗಿದ್ದು 2014 ಕ್ಕಿಂತ ಆರು ಪಟ್ಟು ಹೆಚ್ಚಾಗಿದ್ದು, ಚೀನಾದ ಕಂಪನಿಗಳು ಉತ್ಪಾದನಾ ಘಟಕಗಳನ್ನು ಭಾರತಕ್ಕೆ ಕೊಂಡೊಯ್ದರೆ ಚೀನಾದಲ್ಲಿ ಉದ್ಯೋಗ ಕಡಿತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT