ಬ್ರಹ್ಮಪುತ್ರ 
ವಿದೇಶ

ಜಲವಿದ್ಯುತ್ ಜಲಾಶಯ ಕಾಮಗಾರಿ: ಟಿಬೆಟ್‌ನಲ್ಲಿ ಬ್ರಹ್ಮಪುತ್ರ ಉಪನದಿ ತಡೆ ಹಿಡಿದ ಚೀನಾ

ಚೀನಾ ಟಿಬೆಟ್ ನಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಜಲಾಶಯ ಕಾಮಗಾರಿಗಾಗಿ ಬ್ರಹ್ಮಪುತ್ರ ನದಿಯ ಉಪನದಿಗಳನ್ನು ತಡೆಹಿಡಿದಿದ್ದು ಈ ಮೂಲಕ...

ಬೀಜಿಂಗ್: ಚೀನಾ ಟಿಬೆಟ್ ನಲ್ಲಿ ನಿರ್ಮಿಸುತ್ತಿರುವ ಬೃಹತ್ ಜಲವಿದ್ಯುತ್ ಜಲಾಶಯ ಕಾಮಗಾರಿಗಾಗಿ ಬ್ರಹ್ಮಪುತ್ರ ನದಿಯ ಉಪನದಿಗಳನ್ನು ತಡೆಹಿಡಿದಿದ್ದು ಈ ಮೂಲಕ ಪರೋಕ್ಷವಾಗಿ ಭಾರತದ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದೆ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. 
ಉರಿ ಸೇನಾ ಶಿಬಿರದ ಮೇಲಿನ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗೆ ಮಾಡಿಕೊಂಡಿದ್ದ ಸಿಂಧು ನದಿ ನೀರಿನ ಒಪ್ಪಂದದ ಕುರಿತು ಮರು ಚಿಂತಿಸುವುದಾಗಿ ಭಾರತ ತಿಳಿಸಿತ್ತು. ಈ ನಡುವೆ ಚೀನಾ ಇಂತಹ ಕ್ರಮಕೈಗೊಂಡಿದೆ. 
ಸುಮಾರು 740 ಮಿಲಿಯನ್ ಡಾಲರ್ ವೆಚ್ಚದಲ್ಲಿ ಟಿಬೆಟ್ ನ ಕ್ಸಿಗಜೆ ಎಂಬಲ್ಲಿ ಚೀನಾ ಅಣೆಕಟ್ಟು ನಿರ್ಮಾಣ ಕಾರ್ಯವನ್ನು 2014ರ ಜೂನ್ ನಲ್ಲಿ ಪ್ರಾರಂಭಿಸಿತ್ತು. 2019ರ ವೇಳೆಗೆ ಪೂರ್ಣಗೊಳಿಸುವ ಗುರಿ ಹೊಂದಿರುವ ಚೀನಾ ಪ್ರಸ್ತುತ ಅಣೆಕಟ್ಟು ನಿರ್ಮಾಣ ಕಾರ್ಯಕ್ಕಾಗಿ ಬ್ರಹ್ಮಪುತ್ರಾ ನದಿಯ ಉಪನದಿ ಕ್ಸಿಬುಕು ನದಿಗೆ ಬೃಹತ್ ಅಣೆಕಟ್ಟು ನಿರ್ಮಿಸುತ್ತಿದೆ. ಕ್ಸಿಗಜೆ ಸಿಕ್ಕಿಂಗೆ ಸಮೀಪದಲ್ಲಿದ್ದು ಇಲ್ಲಿಂದ ಬ್ರಹ್ಮಪುತ್ರ ನದಿ ಅರುಣಾಚಲ ಪ್ರದೇಶಕ್ಕೆ ಪ್ರವೇಶಿಸುತ್ತದೆ. 
ಟಿಬೆಟ್ ನಲ್ಲಿ ಬ್ರಹ್ಮಪುತ್ರ ನದಿಗೆ ಅಣೆಕಟ್ಟನ್ನು ನಿರ್ಮಿಸಲು ಮುಂದಾಗಿದ್ದ ಚೀನಾ ಕಾರ್ಯದ ಬಗ್ಗೆ ಭಾರತ ಚಿಂತಿಸುವಂತಾಗಿತ್ತು. ಈ ವೇಳೆ ಚೀನಾ ಭಾರತಕ್ಕೆ ನೀರು ಹರಿಸುವ ಸಂಬಂಧ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ನಾವು ಕೇವಲ ವಿದ್ಯುತ್ ಉತ್ಪಾದನೆ ಮಾಡುತ್ತೇವೆ. ನೀರನ್ನು ತಡೆ ಹಿಡಿಯುವ ಉದ್ದೇಶ ನಮಗಿಲ್ಲ ಎಂದು ಹೇಳಿತ್ತು. 
ಬ್ರಹ್ಮಪುತ್ರ ನದಿಯ ಉಪನದಿಗೆ ತಡೆಯೊಡ್ಡಿದ್ದು ಇದರಿಂದಾಗಿ ಬ್ರಹ್ಮಪುತ್ರ ನದಿಯ ಹರಿವಿನ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಮಾಹಿತಿ ಲಭ್ಯವಿಲ್ಲ ಎಂದು ಚೀನಾ ಮಾಧ್ಯಮ ವರದಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT