ಕುಲಭೂಷಣ್ ಜಾಧವ್ 
ವಿದೇಶ

ಜಾಧವ್‌ ಗಲ್ಲು ಶಿಕ್ಷೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳದಿರಲು ಪಾಕ್ ಸೇನಾಧಿಕಾರಿಗಳು ನಿರ್ಧಾರ

ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರ ಗಲ್ಲು ಶಿಕ್ಷೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಿರಲು....

ಇಸ್ಲಾಮಾಬಾದ್: ಭಾರತದ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್‌ ಅವರ ಗಲ್ಲು ಶಿಕ್ಷೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಿರಲು ಪಾಕಿಸ್ತಾನಸೇನೆಯ ಉನ್ನತ ಅಧಿಕಾರಿಗಳು ಗುರುವಾರ ನಿರ್ಧರಿಸಿದ್ದಾರೆ.
ಇಂದು ರಾವಲ್ಪಿಂಡಿಯಲ್ಲಿರುವ ಸೇನಾ ಪ್ರಧಾನ ಕಚೇರಿಯಲ್ಲಿ ಸೇನಾ ಮುಖ್ಯಸ್ಥ ಜನರಲ್ ಖಮರ್‌ ಜಾವೇದ್‌ ಬಜ್ವಾ ನೇತೃತ್ವದಲ್ಲಿ ನಡೆದ ಕಮಾಂಡರ್‌ಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪಾಕಿಸ್ತಾನ ಸೇನೆಯ ಸಾರ್ವಜನಿಕ ಸಂಪರ್ಕ ವಿಭಾಗದ (ಐಎಸ್‌ಪಿಆರ್‌) ಪ್ರಕಟಣೆ ತಿಳಿಸಿದೆ.
46 ವರ್ಷದ ಕುಲಭೂಷಣ್ ಜಾಧವ್‌ ಅವರಿಗೆ ಕಳೆದ ಮಂಗಳವಾರ ಪಾಕಿಸ್ತಾನದ ಸೇನಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಾಕಿಸ್ತಾನ ಗಲ್ಲು ಶಿಕ್ಷೆ ಜಾರಿ ಮಾಡಿದಲ್ಲಿ ಅದನ್ನು ಪೂರ್ವಯೋಜಿತ ಕೊಲೆ ಎಂದು ಪರಿಗಣಿಸುವುದಾಗಿ ಹೇಳಿದೆ. ಅಲ್ಲದೆ, ಅದರಿಂದ ದ್ವಿಪಕ್ಷೀಯ ಬಾಂಧವ್ಯದ ಮೇಲೆ ಗಂಭೀರ ಪರಿಣಾಮವಾಗಲಿದೆ ಎಂದು ಎಚ್ಚರಿಸಿತ್ತು. ಆದರೆ ಭಾರತದ ಎಚ್ಚರಿಕೆಗೆ ಬಗ್ಗದ ಪಾಕಿಸ್ತಾನ ಸೇನೆ, ದೇಶ ದ್ರೋಹ ಕೃತ್ಯಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT