ಸರ್ತಾಜ್ ಅಜಿಜ್ 
ವಿದೇಶ

ಸೂಕ್ತ ಸಾಕ್ಷ್ಯಾಧಾರಗಳ ಮೇಲೆಯೇ ಜಾಧವ್ ಗೆ ಗಲ್ಲು ಶಿಕ್ಷೆ ನೀಡಲಾಗಿದೆ: ಸರ್ತಾಜ್ ಅಜಿಜ್

ಕುಲಭೂಷಣ್ ಜಾಧವ್ ಗೂಢಚಾರಿಕೆ ನಡೆಸಿದ ಬಗ್ಗೆ ಮತ್ತು ಭಯೋತ್ಪದಾನೆಯಲ್ಲಿ ಭಾಗಿಯಾಗಿರುವ ಬಗ್ಗೆ ನಂಬಲರ್ಹ....

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಗೂಢಚಾರಿಕೆ ನಡೆಸಿದ ಬಗ್ಗೆ ಮತ್ತು ಭಯೋತ್ಪದಾನೆಯಲ್ಲಿ ಭಾಗಿಯಾಗಿರುವ ಬಗ್ಗೆ ನಂಬಲರ್ಹ ಮತ್ತು ನಿರ್ಧಿಷ್ಟ ಸಾಕ್ಷಾಧಾರಗಳನ್ನು ಆಧರಿಸಿಯೇ ಗಲ್ಲು ಶಿಕ್ಷೆ ನೀಡಲಾಗಿದೆ ಎಂದು ಪಾಕಿಸ್ತಾನ ಪ್ರಧಾನಮಂತ್ರಿಗಳ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಸರ್ತಾಜ್ ಅಜಿಜ್ ಅವರು ಶುಕ್ರವಾರ ಹೇಳಿದ್ದಾರೆ.
ನಮ್ಮ ದೇಶದ ಕಾನೂನು ಪ್ರಕಾರವೇ ಜಾಧವ್ ಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿದೆ ಎಂದು ಅಜಿಜ್ ಅವರು, ಭಾರತ-ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಬಿಕ್ಕಟ್ಟು ತಡೆಯಲು ರಾಜತಾಂತ್ರಿಕವಾಗಿ ಹೆಚ್ಚು ಸಕ್ರಿಯವಾಗುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಭಾರತ ನೀಡುತ್ತಿರುವ ಪ್ರತಿಕ್ರಿಯೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ ಎಂದು ಸರ್ತಾಜ್ ಅಜಿಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ವಿಚಾರಣೆ ಇಲ್ಲದೆ ಪಾಕಿಸ್ತಾನ ಜಾಧವ್ ಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂಬ ಭಾರತದ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅಜಿಜ್, ಕುಲಭೂಷಣ್ ಜಾಧವ್ ವಿರುದ್ಧ ಮೊದಲು ಏಪ್ರಿಲ್ 8,2016ರಲ್ಲಿ ಖ್ವೇಟ್ಟಾದಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದಿರ್ಘ ವಿಚಾರಣೆ ನಡೆಸಿಯೇ ಗಲ್ಲು ಶಿಕ್ಷೆ ವಿಧಿಸಿಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಜಾಧವ್ ಗೆ ಕಾನೂನು ಸಹಾಯಕರನ್ನು ಒದಗಿಸಲಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT