ಸಾಂದರ್ಭಿಕ ಚಿತ್ರ 
ವಿದೇಶ

ಅರುಣಾಚಲದಲ್ಲಿ ಹೆಸರುಗಳನ್ನು ಕ್ರಮಬದ್ಧಗೊಳಿಸುವುದು ನಮ್ಮ ಕಾನೂನಾತ್ಮಕ ಹಕ್ಕು: ಚೀನಾ

ಟಿಬೆಟನ್‌ ಧರ್ಮಗುರು ದಲೈ ಲಾಮಾ ಅವರನ್ನು ಮುಂದಿಟ್ಟುಕೊಂಡು ಭಾರತ ಕುತಂತ್ರ ಮಾಡಲು ಮುಂದಾದರೆ ಅದಕ್ಕೆ ತಕ್ಕ ಬೆಲೆ....

ಬೀಜಿಂಗ್: ಟಿಬೆಟನ್‌ ಧರ್ಮಗುರು ದಲೈ ಲಾಮಾ ಅವರನ್ನು ಮುಂದಿಟ್ಟುಕೊಂಡು ಭಾರತ ಕುತಂತ್ರ ಮಾಡಲು ಮುಂದಾದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಚೀನಾ ಸರ್ಕಾರಿ ಮಾಧ್ಯಮ ಭಾರತಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಅರುಣಾಚಲ ಪ್ರದೇಶದ ಆರು ಸ್ಥಳಗಳ ಹೆಸರುಗಳನ್ನು ಅಧಿಕೃತವಾಗಿ ಕ್ರಮಬದ್ಧಗೊಳಿಸುವುದು ನಮ್ಮ ಕಾನೂನಾತ್ಮಕ ಹಕ್ಕು ಎಂದು ಶುಕ್ರವಾರ ಚೀನಾ ಹೇಳಿದೆ.
ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂಬ ಭಾರತದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಂಗ್ ಅವರು, 'ಭಾರತ- ಚೀನಾ ಗಡಿಯ ಪೂರ್ವ ಭಾಗದಲ್ಲಿನ ಚೀನಾದ ಸ್ಥಾನ ಸ್ಪಷ್ಟವಾಗಿದೆ ಮತ್ತು ಸ್ಥಿರವಾಗಿದೆ' ಎಂದು ಹೇಳಿದ್ದಾರೆ.
ಮೊಂಬ ಜನಾಂಗ ಮತ್ತು ಟಿಬೆಟಿಯನ್ ಚೀನಿಯರಿಗೆ ಸಂಬಂಧಿಸಿದ ಹೆಸರುಗಳನ್ನು ಅಲ್ಲಿ ಬಳಸಲಾಗಿದೆ ಮತ್ತು ಇದು ಸತ್ಯವಾಗಿದ್ದು, ಇದನ್ನು ಬದಲಿಸಲು ಸಾಧ್ಯವಿಲ್ಲ. ಈ ಹೆಸರುಗಳನ್ನು ಕ್ರಮಬದ್ಧಗೊಳಿಸುವುದು ಮತ್ತು ಅದನ್ನು ಪ್ರಚಾರಪಡಿಸುವುದು ನಮ್ಮ ಕಾನೂನಾತ್ಮಕ ಹಕ್ಕು ಎಂದು ಕಂಗ್ ಹೇಳಿದ್ದಾರೆ.
ನಿನ್ನೆಯಷ್ಟೇ ಅರುಣಾಚಲ ಪ್ರದೇಶದ ಆರು ನಗರಗಳಿಗೆ ಮರುನಾಮಕರಣ ಮಾಡಿರುವ ಚೀನಾದ ಕ್ರಮವನ್ನು ಖಂಡಿಸಿದ್ದ ಭಾರತ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಮರುನಾಮಕರಣ ಮಾಡಿದರೆ ಅಕ್ರಮ ಸಕ್ರಮವಾಗುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗೋಪಾಲ್ ಬಗಲಿ ಅವರು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT