ದೇಶ ವಿಭಜನೆಯ ಚಿತ್ರ 
ವಿದೇಶ

ಪಾಕ್ ಪಠ್ಯಪುಸ್ತಕದಲ್ಲಿ 'ಹಿಂದೂಗಳು ಕೊಲೆಗಡುಕರು': ಶಾಲಾ ಮಕ್ಕಳಿಗೆ ಭೋದನೆ

ದೇಶ ವಿಭಜನೆಯ ಆರೋಪವನ್ನು ಹಿಂದೂಗಳ ಮೇಲೆ ಹೊರಿಸಿ ಪಾಕಿಸ್ತಾನ ಪಠ್ಯ ಪುಸ್ತಕದಲ್ಲಿ ಹಿಂದೂಗಳು ಕೊಲೆಗಡುಕರು ಎಂದು ಶಾಲಾ ಮಕ್ಕಳಿಗೆ ಬೋಧಿಸುತ್ತಿದೆ...

ಇಸ್ಲಾಮಾಬಾದ್: ದೇಶ ವಿಭಜನೆಯ ಆರೋಪವನ್ನು ಹಿಂದೂಗಳ ಮೇಲೆ ಹೊರಿಸಿ ಪಾಕಿಸ್ತಾನ ಪಠ್ಯ ಪುಸ್ತಕದಲ್ಲಿ ಹಿಂದೂಗಳು ಕೊಲೆಗಡುಕರು ಎಂದು ಶಾಲಾ ಮಕ್ಕಳಿಗೆ ಬೋಧಿಸುತ್ತಿದೆ. 
ಭಾರತದ ವಿರುದ್ಧ ಸದಾ ದ್ವೇಷಕಾರುವ ಪಾಕಿಸ್ತಾನ ಇದೀಗ ಹಿಂದೂ ವಿರೋಧಿ ಅಂಶಗಳನ್ನೇ ಶಾಲಾಮಕ್ಕಳ ತಲೆಗೂ ತುರುಕುತ್ತಿದೆ. ದೇಶ ವಿಭಜನೆ ಬಗ್ಗೆ ಭಾರತ ಶಾಲಾ ಪಠ್ಯದಲ್ಲಿ ಒಂದು ರೀತಿ ಇದ್ದರೆ, ಪಾಕಿಸ್ತಾನದ ಪಠ್ಯದಲ್ಲಿ ಬೇರೆ ರೀತಿ ಇದೆ. ಇದನ್ನು ಬಳಿಸಿಕೊಂಡು ಮಕ್ಕಳಲ್ಲಿ ದ್ವೇಷ ಕಾರುವುದಕ್ಕೆ ಸೀಮಿತಗೊಳಿಸಿದೆ. 
ಇಂತರ ಪಠ್ಯಗಳಿಂದ ಶಾಲಾ ಮಕ್ಕಳ ಮನಸ್ಸಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು ಎರಡೂ ದೇಶಗಳ ಮಧ್ಯೆ ಸಾಮರಸ್ಯ ಮೂಡಿಸುವ ಯತ್ನಕ್ಕೆ ತೀವ್ರ ಹಿನ್ನಡೆಯಾಗುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. 
ದೇಶ ವಿಭಜನೆ ವೇಳೆ ಹಿಂದೂಗಳು ಪಾಕ್ ನಿಂದ ಭಾರತಕ್ಕೆ, ಭಾರತದಿಂದ ಮುಸ್ಲಿಂರು ಪಾಕಿಸ್ತಾನಕ್ಕೆ ವಲಸೆ ಹೋಗಿದ್ದರು. ಇದು ಶತಮಾನದ ಅತಿ ದೊಡ್ಡ ವಲಸೆ ಎಂದು ಗುರುತಿಸಿಕೊಂಡಿದೆ. ಈ ವೇಳೆ ವ್ಯಾಪಕ ಹಿಂಸಾಚಾರ ಸಂಭವಿಸಿದ್ದು ಸಾವಿರಾರೂ ಮಂದಿ ಸಾವಿಗೀಡಾಗಿದ್ದರು. ಇತಿಹಾಸವನ್ನು ಪಾಕಿಸ್ತಾನ ಸಂಪೂರ್ಣವಾಗಿ ತಿರುಚಿದ್ದು ಹಿಂದೂಗಳು ಮುಸ್ಲಿಂರನ್ನು ಹತ್ಯೆಗೈದರು, ಆಸ್ತಿ ಪಾಸ್ತಿ ನಾಶ ಮಾಡಿದರು. ಭಾರತದಿಂದ ಬಲವಂತವಾಗಿ ಮುಸ್ಲಿಂರನ್ನು ಹೊರದೂಡಿದರು. ಇದಾದ ನಂತರ ನಾವು ಪಾಕಿಸ್ತಾನವನ್ನು ರಚಿಸಿದೆವು ಎಂದು ಬರೆಯಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT