ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ 
ವಿದೇಶ

ಶಾಂತಿ ಬೇಕಿದ್ದರೆ ಕಾಶ್ಮೀರ ಕುರಿತು ಮಾತುಕತೆ ನಡೆಸಿ: ಭಾರತಕ್ಕೆ ಪಾಕಿಸ್ತಾನ

ೊಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದರೆ ಭಾರತ ಹಾಗೂ ಪಾಕಿಸ್ತಾನ ರಾಷ್ಟ್ರಗಳ ನಡುವಿನ ಮಾತುಕತೆಯೊಂದೇ ರಾಮಬಾಣ ಎಂದು ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ...

ಇಸ್ಲಾಮಾಬಾದ್: ಶಾಂತಿ ಬೇಕಿದ್ದರೆ ಕಾಶ್ಮೀರ ವಿವಾದ ಕುರಿತು ಮಾತುಕತೆ ನಡೆಸಿ ಎಂದು ಭಾರತಕ್ಕೆ ಪಾಕಿಸ್ತಾನ ನೂತನ ವಿದೇಶಾಂಗ ಸಚಿವ ಖ್ವಾಜಾ ಆಸಿಫ್ ಅವರು ಹೇಳಿದ್ದಾರೆ. 


ಪಾಕಿಸ್ತಾನ ನೂತನ ವಿದೇಶಾಂಗ ಸಚಿವರಾಗಿ ನಿನ್ನೆ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿರುವ ಅವರು, ನೆರೆರಾಷ್ಟ್ರಗಳಾದ ಭಾರತ ಮತ್ತು ಅಫ್ಘಾನಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಪಾಕಿಸ್ತಾನ ಬಯಸುತ್ತದೆ. ಆದರೆ, ಈ ಎರಡೂ ರಾಷ್ಟ್ರಗಳು ಧನಾತ್ಮಕ ಪ್ರತಿಕ್ರಿಯೆಗಳನ್ನು ನೀಡುತ್ತಿಲ್ಲ. ಭಾರತ ಹಾಗೂ ಆಫ್ಘಾನಿಸ್ತಾನ ರಾಷ್ಟ್ರಗಳು ಪಾಕಿಸ್ತಾನದ ಉತ್ತಮ ನೆರೆರಾಷ್ಟ್ರವಾಗಲು ಇದು ಸಕಾಲವಾಗಿದ್ದು, ಪಾಕಿಸ್ತಾನದ ಶಾಂತಿಯುತ ಕರೆಗೆ ಉಭಯ ರಾಷ್ಟ್ರಗಳು ಧನಾತ್ಮಕ ಪ್ರತಿಕ್ರಿಯೆ ನೀಡಿ, ಆರೋಪ-ಪ್ರತ್ಯಾರೋಪಗಳ ಆಟಗಳನ್ನು ನಿಲ್ಲಿಸಬೇಕಿದೆ ಎಂದು ಹೇಳಿದ್ದಾರೆ. 

ನಂತರ ಕಾಶ್ಮೀರ ವಿವಾದ ಸಂಬಂಧ ಭಾರತ ಹಾಗೂ ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಮಾತನಾಡಿರುವ ಅವರು, ನಮ್ಮ ಗಡಿಯನ್ನು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಕಾಶ್ಮೀರ ಸಮಸ್ಯೆಯನ್ನು ಪರಿಹರಿಸುವ ಮೂಲಕವಷ್ಟೇ ಉಭಯ ರಾಷ್ಟ್ರಗಳ ನಡುವೆ ಶಾಶ್ವತವಾದ ಶಾಂತಿಯನ್ನು ಸಾಧಿಸಲು ಸಾಧ್ಯ. ಶಾಂತಿ ಬೇಕಿದ್ದರೆ ಕಾಶ್ಮೀರ ವಿವಾದ ಕುರಿತಂತೆ ಭಾರತ ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಬೇಕು ಎಂದಿದ್ದಾರೆ. 

ಇದೇ ವೇಳೆ ಉಗ್ರವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಬಹಳ ಹಿಂದಿನಿಂದಲೂ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತಿದೆ. ಪಾಕಿಸ್ತಾನ ಸೈನಿಕರ ತ್ಯಾಗ ಹಾಗೂ ಬಲಿದಾನಗಳ ಬಳಿಕ ಇದೀಗ ಉಗ್ರರ ಬೆದರಿಕೆಗಳು ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂದಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

Hormuz ಉದ್ವಿಗ್ನತೆ ತೀವ್ರ: Chabahar port ಗುರಿಯಾಗಿಸಿ ಅಮೆರಿಕಾ ಭೀಕರ ದಾಳಿ, Iranಗೆ ಮತ್ತೊಂದು ಪ್ರಬಲ ಹೊಡೆತ..!

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ, ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ..!

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಮದುವೆ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ: ಭೀಕರ ತಿರುವು, ತಿರುಪತಿಯಲ್ಲಿ ಡಬಲ್ ಮರ್ಡರ್