ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಸಂಗ್ರಹ ಚಿತ್ರ) 
ವಿದೇಶ

ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ: ಪ್ರಧಾನಿ ಮೋದಿ-ಅಮೆರಿಕ ಅಧ್ಯಕ್ಷ ಟ್ರಂಪ್ ಸಮ್ಮತಿ

ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಕರೆ ಮಾಡುವ ಮೂಲಕ ಕರೆ ಮಾಡಿ ಶುಭಾಶಯಗಳನ್ನು ಕೋರಿದ್ದು, ಈ ವೇಳೆ ಉಭಯ ನಾಯಕರು...

ವಾಷಿಂಗ್ಟನ್: ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೂರವಾಣಿ ಕರೆ ಮಾಡುವ ಮೂಲಕ ಕರೆ ಮಾಡಿ ಶುಭಾಶಯಗಳನ್ನು ಕೋರಿದ್ದು, ಈ ವೇಳೆ ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಮಾತುಕತೆ ವೇಳೆ ಉಭಯ ದೇಶಗಳ ನಾಯಕರು ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪಿಸಲು ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಡೋಕ್ಲಾಮ್ ವಿವಾದ ಸಂಬಂಧ ಭಾರತ ಚೀನಾ ಜೊತೆಗೆ ಸಂಘರ್ಷಕ್ಕಿಳಿದಿರುವ ನಡುವೆಯೇ ಈ ಮಾತುಕತೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ. 
ದೂರವಾಣಿ ಸಂಭಾಷಣೆಯ ವೇಳೆ, ಮುಂದಿನ ತಿಂಗಳು ಅಮೆರಿಕದಿಂದ ಮೊದಲ ಬಾರಿ ಭಾರತಕ್ಕೆ ಕಚ್ಚಾತೈಲ ಪೂರೈಕೆ ಆಗುತ್ತಿರುವುದನ್ನು ಟ್ರಂಪ್ ಸ್ವಾಗತಿಸಿದ್ದಾರೆ. ಭಾರತಕ್ಕೆ ವಿಶ್ವಾಸಾರ್ಹ ಮತ್ತು ದೀರ್ಘಾಕಾಲೀನ ತೈಲ ಪೂರೈಕೆಯನ್ನು ಅಮೆರಿಕ ಮುಂದುವರೆಸಲಿದೆ ಎಂದು ಟ್ರಂಪ್ ಹೇಳಿದ್ದಾರೆ. 
ಸಚಿವಾಲಯದ ದ್ವಿಪಕ್ಷೀಯ ಮಾತುಕತೆಯ ಮೂಲಕ ಇಂಡೋ-ಪೆಸಿಫಿಕ್ ವಲಯದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಲು ಮೋದಿ ಮತ್ತು ಟ್ರಂಪ್ ಸಹಮತ ವ್ಯಕ್ತಪಡಿಸಿದ್ದಾರೆ. 
ಇಬ್ಬರೂ ಮುಖಂಡರು ನವೆಂಬರ್ ನಲ್ಲಿ ನಡೆಯಲಿರುವ ಜಾಗತಿಕ ಉದ್ಯೋಗ ಮೇಳವನ್ನು ನೋಡುತ್ತಿದ್ದಾರೆ. ಉತ್ತರ ಕೊರಿಯಾ ಬಿಕ್ಕಟ್ಟಿನ ವಿರುದ್ಧ ವಿಶ್ವವನ್ನು ಒಂದುಗೂಡಿಸಿದ ಶಕ್ತಿಶಾಲಿ ನಾಯಕತ್ವಕ್ಕಾಗಿ ಟ್ರಂಪ್ ಅವರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಶ್ವೇತಭವನದ ಹೇಳಿಕೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT