ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ 
ವಿದೇಶ

ಅಮೆರಿಕ ನೆರವಿಗೆ ವಿದಾಯ ಹೇಳಲು ಇದು ಸಕಾಲ: ಶಹಭಾಜ್ ಷರೀಫ್

ಅಮೆರಿಕಾ ರಾಷ್ಟ್ರದ ನೆರವಿದೆ ವಿದಾಯ ಹೇಳಲು ಇದು ಸಕಾಲವಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ...

ಲಾಹೋರ್: ಅಮೆರಿಕಾ ರಾಷ್ಟ್ರದ ನೆರವಿದೆ ವಿದಾಯ ಹೇಳಲು ಇದು ಸಕಾಲವಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, 'ಭಯೋತ್ಪಾದಕ ಸಂಘಟನೆಗಳಿಗೆ ಸುರಕ್ಷಿತ ನೆಲೆ ಒದಗಿಸುತ್ತಿರುವ ಪಾಕ್‌ ನೀತಿಯ ಬಗ್ಗೆ ಇನ್ನು ನಾವು ಸುಮ್ಮನಿರಲಾರೆವು. ಅಫ್ಘಾನಿಸ್ತಾನದಲ್ಲಿ ಶಾಂತಿ, ಸ್ಥಿರತೆ ಕಾಪಾಡುವಲ್ಲಿ ನಮ್ಮ ಪ್ರಯತ್ನದ ಜತೆ ಕೈಜೋಡಿಸುವ ಮೂಲಕ ಪಾಕಿಸ್ತಾನ ಸಾಕಷ್ಟು ಪ್ರಯೋಜನಗಳನ್ನು ಗಳಿಸಬಹುದಿತ್ತು. ಆದರೆ ಅದು ಅಪರಾಧಿಗಳು ಮತ್ತು ಉಗ್ರರಿಗೆ ಸುರಕ್ಷಿತ ನೆಲೆಗಳನ್ನು ಒದಗಿಸುತ್ತ ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುತ್ತಿದೆ. ಪಾಕಿಸ್ತಾನವು ಭಯೋತ್ಪಾದಕರನ್ನು ಮಟ್ಟಹಾಕದಿದ್ದರೆ ಅದರೊಂದಿಗಿನ ಮಿಲಿಟರಿ ಮತ್ತು ಇತರ ಸಹಕಾರ ಮುಂದುವರಿಯದು ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಹಭಾಜ್ ಷರೀಫ್ ಅವರು, ಭಯೋತ್ಪಾದನೆ, ಬಡತನ ಹಾಗೂ ಹಿಂದುಳಿದಿರುವಿಕೆಯಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿರುವ ನೆರವು ಕುರಿತು ರಾಷ್ಟ್ರೀಯ ಹಾಗೂ ಆಂತರಾಷ್ಟ್ರೀ ಮಟ್ಟದಲ್ಲಿ ಉತ್ಪ್ರೇಕ್ಷಿತವಾದ ಟೀಕೆ ಹಾಗೂ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಹೇಳಿದ್ದಾರೆ. 
ಇದೀಗ ಧನ್ಯವಾದ ಹೇಳುವ ಮೂಲಕ ಅಮೆರಿಕಾದ ನೆರವಿನ ಅಧ್ಯಾಯಕ್ಕೆ ಪಾಕಿಸ್ತಾನ ವಿದಾಯ ಹೇಳುವ ಕಾಲ ಬಂದಿದ್ದು, ಇಂತಹ ಹೇಳಿಕೆ ಹಾಗೂ ಟೀಕೆಗಳಿಗೆ ಇದೊಂದೇ ಮಾರ್ಗದ ಮೂಲಕ ತಿರುಗೇಟು ನೀಡಬಹುದಾಗಿದೆ. ಪಾಕಿಸ್ತಾನದಲ್ಲಿರುವ ಜನರು ವಿಶ್ವದ ಶಾಂತಿ ಹಾಗೂ ಸಮೃದ್ಧಿಗೆ ಕೊಡುಗೆ ನೀಡಲು ಬದ್ಧರಾಗಿದ್ದಾರೆಂದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT