ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ 
ವಿದೇಶ

ಅಮೆರಿಕ ನೆರವಿಗೆ ವಿದಾಯ ಹೇಳಲು ಇದು ಸಕಾಲ: ಶಹಭಾಜ್ ಷರೀಫ್

ಅಮೆರಿಕಾ ರಾಷ್ಟ್ರದ ನೆರವಿದೆ ವಿದಾಯ ಹೇಳಲು ಇದು ಸಕಾಲವಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ...

ಲಾಹೋರ್: ಅಮೆರಿಕಾ ರಾಷ್ಟ್ರದ ನೆರವಿದೆ ವಿದಾಯ ಹೇಳಲು ಇದು ಸಕಾಲವಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಶಹಭಾಜ್ ಷರೀಫ್ ಅವರು ಶನಿವಾರ ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, 'ಭಯೋತ್ಪಾದಕ ಸಂಘಟನೆಗಳಿಗೆ ಸುರಕ್ಷಿತ ನೆಲೆ ಒದಗಿಸುತ್ತಿರುವ ಪಾಕ್‌ ನೀತಿಯ ಬಗ್ಗೆ ಇನ್ನು ನಾವು ಸುಮ್ಮನಿರಲಾರೆವು. ಅಫ್ಘಾನಿಸ್ತಾನದಲ್ಲಿ ಶಾಂತಿ, ಸ್ಥಿರತೆ ಕಾಪಾಡುವಲ್ಲಿ ನಮ್ಮ ಪ್ರಯತ್ನದ ಜತೆ ಕೈಜೋಡಿಸುವ ಮೂಲಕ ಪಾಕಿಸ್ತಾನ ಸಾಕಷ್ಟು ಪ್ರಯೋಜನಗಳನ್ನು ಗಳಿಸಬಹುದಿತ್ತು. ಆದರೆ ಅದು ಅಪರಾಧಿಗಳು ಮತ್ತು ಉಗ್ರರಿಗೆ ಸುರಕ್ಷಿತ ನೆಲೆಗಳನ್ನು ಒದಗಿಸುತ್ತ ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುತ್ತಿದೆ. ಪಾಕಿಸ್ತಾನವು ಭಯೋತ್ಪಾದಕರನ್ನು ಮಟ್ಟಹಾಕದಿದ್ದರೆ ಅದರೊಂದಿಗಿನ ಮಿಲಿಟರಿ ಮತ್ತು ಇತರ ಸಹಕಾರ ಮುಂದುವರಿಯದು ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶಹಭಾಜ್ ಷರೀಫ್ ಅವರು, ಭಯೋತ್ಪಾದನೆ, ಬಡತನ ಹಾಗೂ ಹಿಂದುಳಿದಿರುವಿಕೆಯಿಂದ ಬಳಲುತ್ತಿರುವ ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿರುವ ನೆರವು ಕುರಿತು ರಾಷ್ಟ್ರೀಯ ಹಾಗೂ ಆಂತರಾಷ್ಟ್ರೀ ಮಟ್ಟದಲ್ಲಿ ಉತ್ಪ್ರೇಕ್ಷಿತವಾದ ಟೀಕೆ ಹಾಗೂ ಹೇಳಿಕೆಗಳನ್ನು ನೀಡಲಾಗುತ್ತಿದೆ. ಇದು ಗಾಯದ ಮೇಲೆ ಉಪ್ಪು ಸವರಿದಂತಾಗಿದೆ ಎಂದು ಹೇಳಿದ್ದಾರೆ. 
ಇದೀಗ ಧನ್ಯವಾದ ಹೇಳುವ ಮೂಲಕ ಅಮೆರಿಕಾದ ನೆರವಿನ ಅಧ್ಯಾಯಕ್ಕೆ ಪಾಕಿಸ್ತಾನ ವಿದಾಯ ಹೇಳುವ ಕಾಲ ಬಂದಿದ್ದು, ಇಂತಹ ಹೇಳಿಕೆ ಹಾಗೂ ಟೀಕೆಗಳಿಗೆ ಇದೊಂದೇ ಮಾರ್ಗದ ಮೂಲಕ ತಿರುಗೇಟು ನೀಡಬಹುದಾಗಿದೆ. ಪಾಕಿಸ್ತಾನದಲ್ಲಿರುವ ಜನರು ವಿಶ್ವದ ಶಾಂತಿ ಹಾಗೂ ಸಮೃದ್ಧಿಗೆ ಕೊಡುಗೆ ನೀಡಲು ಬದ್ಧರಾಗಿದ್ದಾರೆಂದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ