ಸಂಗ್ರಹ ಚಿತ್ರ 
ವಿದೇಶ

ಡೋಕ್ಲಾಮ್ ಬಿಕ್ಕಟ್ಟು ಭಾರತಕ್ಕೆ ಒಂದು ಪಾಠ ಎಂದ ಚೀನಾ!

ಭಾರತ ಹಾಗೂ ಚೀನಾ ರಾಷ್ಟ್ರಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದ್ದ ಡೋಕ್ಲಾಮ್ ವಿವಾದ ಸುಖಾಂತ್ಯ ಕಂಡಿದ್ದು, ಈ ನಡುವೆ ಚೀನಾ ಮತ್ತೆ ಭಾರತವನ್ನು ಕೆಣಕುವ ತನ್ನ ಯತ್ನಗಳನ್ನು ಮುಂದುರೆಸಿದೆ. ಡೋಕ್ಲಾಮ್ ಬಿಕ್ಕಟ್ಟಿನ ಸಂಪೂರ್ಣ...

ಬೀಜಿಂಗ್: ಭಾರತ ಹಾಗೂ ಚೀನಾ ರಾಷ್ಟ್ರಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದ್ದ ಡೋಕ್ಲಾಮ್ ವಿವಾದ ಸುಖಾಂತ್ಯ ಕಂಡಿದ್ದು, ಈ ನಡುವೆ ಚೀನಾ ಮತ್ತೆ ಭಾರತವನ್ನು ಕೆಣಕುವ ತನ್ನ ಯತ್ನಗಳನ್ನು ಮುಂದುರೆಸಿದೆ. ಡೋಕ್ಲಾಮ್ ಬಿಕ್ಕಟ್ಟಿನ ಸಂಪೂರ್ಣ ಬೆಳವಣಿಗೆಗಳಿಂದ ಭಾರತ ಪಾಠ ಕಲಿಯಬೇಕಿದೆ ಎಂದು ಚೀನಾ ಮಂಗಳವಾರ ಹೇಳಿದೆ. 
ಡೋಕ್ಲಾಮ್ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪೀಪಲ್ಸ್ ಲಿಬ್ರೆರೇಷನ್ ಆರ್ಮಿಯ ವಕ್ತಾರ ಕರ್ನಲ್ ವೂ ಕಿಯಾನ್, ಡೋಕ್ಲಾಮ್ ಬಿಕ್ಕಟ್ಟಿನ ಸಂಪೂರ್ಣ ಬೆಳವಣಿಗೆಗಳಿಂದ ಭಾರತ ಪಾಠ ಕಲಿಸಬೇಕಿದೆ. ಗಡಿ ಕುರಿತ ಒಪ್ಪಂದಗಳು ಮತ್ತು ಅಂತರಾಷ್ಟ್ರೀಯ ಕಾನೂನಿನ ಮೂಲಭೂತ ತತ್ತ್ವಗಳಿಗೆ ಭಾರತ ಬದ್ಧವಾಗಿರಬೇಕು ಎಂದು ಹೇಳಿದ್ದಾರೆ. 
ಗಡಿಯಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡುವ ಸಲುವಾಗಿ ಮತ್ತು ಉಭಯ ರಾಷ್ಟ್ರಗಳ ಸೇನಾ ಪಡೆಗಳ ಆರೋಗ್ಯಕರ ಬೆಳವಣಿಗೆಗಳನ್ನು ಉತ್ತೇಜಿಸಲು ಉಭಯ ರಾಷ್ಟ್ರಗಳು ಕೆಲಸ ಮಾಡಬೇಕಿದೆ ಎಂದು ತಿಳಿಸಿದ್ದಾರೆ. 
ಡೋಕ್ಲಾಮ್ ವಿವಾದ ಸಂಬಂಧ ಭಾರತ ಹಾಗೂ ಚೀನಾ ಸೇನೆ ಮುಖಾಮುಖಿಗೊಂಡ ಬಳಿಕ ವಿವಾದಿತ ಗಡಿಯಲ್ಲಿ ಚೀನಾ ಪಡೆಗಳು ಹೆಚ್ಚಿನ ಕಣ್ಗಾವಲಿರಿಸಲಿದೆ. ದೇಶದ ಗಡಿ ಹಾಗೂ ಸಾರ್ವಭೌಮತ್ವವನ್ನು ಚೀನಾ ಪಡೆಗಳು ಸಮರ್ಥಿಸಿಕೊಳ್ಳುತ್ತದೆ. ಪ್ರಾದೇಶಿಕ ಶಾಂತಿ ಹಾಗೂ ಗಡಿಯಲ್ಲಿರುವ ಸಾಮಾನ್ಯ ಜನರ ಹಿತಾಸಕ್ತಿಗೆ ಅನುಗುಣವಾಗಿ ಭಾರತ ಹಾಗೂ ಚೀನಾ ರಾಷ್ಟ್ರಗಳು ಗಡಿಯಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಕಾಪಾಡಬೇಕಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

Delhi Blast: ಮತ್ತೆ 4 ಪ್ರಮುಖ ಆರೋಪಿಗಳ ಬಂಧನ, ಬಂಧಿತರ ಸಂಖ್ಯೆ 6 ಕ್ಕೇರಿಕೆ

Vaikunta Ekadasi: ತಿರುಮಲ ವೈಕುಂಠ ದ್ವಾರ ದರ್ಶನ ಕುರಿತು TTD ಮಹತ್ವದ ಮಾಹಿತಿ, ಆನ್​ಲೈನ್​ನಲ್ಲಿ ಮಾತ್ರ ಟಿಕೆಟ್ ಲಭ್ಯ!

News headlines 20-11-2025| ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ 5 ವರ್ಷ ನಾನೇ ಸಿಎಂ-ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ

Jammu: ದೇಶ ವಿರೋಧಿ ಚಟುವಟಿಕೆ ಆರೋಪ, 'ಕಾಶ್ಮೀರ್ ಟೈಮ್ಸ್' ಕಚೇರಿ ಮೇಲೆ ದಾಳಿ; AK-47 ಕಾರ್ಟ್ರಿಡ್ಜ್‌ಗಳು ಪತ್ತೆ!

SCROLL FOR NEXT