ಮಣಿ ಶಂಕರ್ ಅಯ್ಯರ್ ಮತ್ತು ಪ್ರಧಾನಿ ಮೋದಿ (ಸಂಗ್ರಹ ಚಿತ್ರ) 
ವಿದೇಶ

ನಮ್ಮ ಹೆಸರು ಬಳಸದೆ, ಸ್ವಂತ ಸಾಮರ್ಥ್ಯದಿಂದ ಚುನಾವಣೆ ಗೆಲ್ಲಿ: ಮೋದಿಗೆ ಪಾಕ್ ಟಾಂಗ್

ಪಾಕಿಸ್ತಾನದ ಹೆಸರು ದುರ್ಬಳಕೆ ಮಾಡಿಕೊಳ್ಳದೇ ನಿಮ್ಮ ಸ್ವಂತ ಸಾಮರ್ಥ್ಯದಿಂದ ಗುಜರಾತ್ ಚುನಾವಣೆ ಗೆಲ್ಲಿ..ಚುನಾವಣಾ ಗೆಲುವಿಗಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪಾಕಿಸ್ತಾನ ಸರ್ಕಾರ ಟಾಂಗ್ ನೀಡಿದೆ.

ಇಸ್ಲಾಮಾಬಾದ್: ಪಾಕಿಸ್ತಾನದ ಹೆಸರು ದುರ್ಬಳಕೆ ಮಾಡಿಕೊಳ್ಳದೇ ನಿಮ್ಮ ಸ್ವಂತ ಸಾಮರ್ಥ್ಯದಿಂದ ಗುಜರಾತ್ ಚುನಾವಣೆ ಗೆಲ್ಲಿ..ಚುನಾವಣಾ ಗೆಲುವಿಗಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಬೇಡ ಎಂದು ಪ್ರಧಾನಿ ನರೇಂದ್ರ  ಮೋದಿಗೆ ಪಾಕಿಸ್ತಾನ ಸರ್ಕಾರ ಟಾಂಗ್ ನೀಡಿದೆ.
ಕಾಂಗ್ರೆಸ್ ಮುಖಂಡರು ಪಾಕಿಸ್ತಾನ ಸರ್ಕಾರ ಮತ್ತು ಐಎಸ್ ಐ ಅಧಿಕಾರಿಗಳೊಂದಿಗೆ ರಹಸ್ಯ ಭೇಟಿ ಮಾಡಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ  ನೀಡಿರುವ ಪಾಕಿಸ್ತಾನ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿರುಗೇಟು ನೀಡಿದೆ. ಈ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಇಲಾಖೆಯ ವಕ್ತಾರ ಡಾ. ಮಹಮದ್ ಫೈಸಲ್ ಅವರು ಟ್ವಿಟರ್ ನಲ್ಲಿ ಬರೆದಿದ್ದು, ಪಾಕಿಸ್ತಾನವನ್ನು  ಚುನಾನಪಣಾ ಪ್ರತಾರದಲ್ಲಿ ದುರ್ಬಳಕೆ ಮಾಡುವುದನ್ನು ಭಾರತ ಕೈ ಬಿಡಬೇಕು. ಚುನಾವಣೆಗಳನ್ನು ನಿಮ್ಮ ಸ್ವಂತ ಸಾಮರ್ಥ್ಯದಿಂದ ಗೆಲ್ಲಬೇಕೇ ಹೊರತು ಇದಕ್ಕಾಗಿ ಪಾಕಿಸ್ತಾನದ ಹೆಸರು ದುರ್ಬಳಕೆ ಸರಿಯಲ್ಲ. ಭಾರತದ  ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅಲ್ಲಿನ ರಾಜಕಾರಣಿಗಳ ಪಾಕಿಸ್ತಾನ ಕುರಿತ ಹೇಳಿಕೆಗಳು ಸತ್ಯಕ್ಕೆ ದೂರವಾದದ್ದು, ಮತ್ತು ಬೇಜವಾಬ್ದಾರಿಯುತವಾದದ್ದು ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗಷ್ಟೇ ಗುಜರಾತ್ ನಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಅವರ ಮನೆಗೆ ಪಾಕಿಸ್ತಾನದ ರಾಯಭಾರಿಗಳು ಆಗಮಿಸಿ ರಹಸ್ಯ ಸಭೆ ನಡೆಸಿದ್ದರು ಎಂದು  ಆರೋಪಿಸಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್ ಪಕ್ಷ ಬಿಜೆಪಿ ನಾಯಕರೇ ಪಾಕಿಸ್ತಾನದ ಐಎಸ್ ಐ ನೆರವು ನೀಡುವ ಮೂಲಕ ಪಠಾಣ್ ಕೋಟ್ ವಾಯುನೆಲೆ ಮೇಲೆ ಉಗ್ರ ದಾಳಿಯಾಗುವಂತೆ ಮಾಡಿದ್ದರು ಎಂದು  ತಿರುಗೇಟು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT