ಸಂಗ್ರಹ ಚಿತ್ರ 
ವಿದೇಶ

ಡೊಕ್ಲಾಂ ನಲ್ಲಿ ಚೀನಾ ಕ್ಯಾತೆ; ವಿವಾದಿತ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸೇನೆ ನಿಯೋಜನೆ

ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸ ಮಾಡಿದ್ದು, ವಿವಾದಿತ ಗಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

ಬೀಜಿಂಗ್: ಭಾರತ ಮತ್ತು ಚೀನಾ ನಡುವಿನ ಶೀತಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದಕ್ಕೆ ಮತ್ತೇ ಡ್ರಾಗನ್ ಸೇನೆ ತುಪ್ಪ ಸುರಿಯುವ ಕೆಲಸ ಮಾಡಿದ್ದು, ವಿವಾದಿತ ಗಡಿಯಲ್ಲಿ ದೊಡ್ಡ  ಪ್ರಮಾಣದಲ್ಲಿ ಸೇನೆ  ನಿಯೋಜಿಸಿದೆ ಎಂದು ತಿಳಿದುಬಂದಿದೆ.
ಸೇನಾ ಮೂಲಗಳ ಪ್ರಕಾರ ವಿವಾದಿತ ಡೊಕ್ಲಾಂ ಗಡಿ ಪ್ರದೇಶದಲ್ಲಿ ಚೀನಾದ ಸುಮಾರು 1600ರಿಂದ 1800 ಸೈನಿಕರು ಶಾಶ್ವತ ಶಿಬಿರಗಳನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದು, ಅದರ ಮೂಲಕವೇ ಕಾರ್ಯ ನಿರ್ವಹಿಸಲಿದ್ದಾರೆ ಎಂದು  ಹೇಳಲಾಗಿದೆ.
ಈ ಹಿಂದೆಯೇ ಚೀನಾ ರಕ್ಷಣಾ ಇಲಾಖೆಯ ವಕ್ತಾರ ಕ.ವೂ. ಖಿಯಾನ್ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿ,  'ಡೋಕ್ಲಾಂ ಚೀನಾದ್ದು. ಈ ಕಾರಣದಿಂದ ಇಲ್ಲಿ ಸೇನೆಯನ್ನು ನಿಯೋಜಿಸಿದ್ದೇವೆ. ಚಳಿಗಾಲದ ಸಂದರ್ಭದಲ್ಲಿ  ಮತ್ತಷ್ಟು ಸೇನೆ  ನಿಯೋಜಿಸುತ್ತೇವೆ ಎಂದು ಹೇಳುವ ಮೂಲಕ ಮತ್ತೆ ವಿವಾದವನ್ನು ಕೆದಕಿದ್ದರು. ಇದೀಗ ಇದಕ್ಕೆ ಇಂಬು ನೀಡುವಂತೆ ಈಗಾಗಲೇ ವಿವಾದಿತ ಪ್ರದೇಶದಲ್ಲಿ ಚೀನಾದ ಸುಮಾರು 1600 ರಿಂದ 1800 ಸೈನಿಕರು  ನಿಯೋಜನೆಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೇನಾ ಮೂಲಗಳ ಪ್ರಕಾರ ಸಿಕ್ಕಿಂ-ಭೂತಾನ್ ಮತ್ತು ಟಿಬೆಟ್ ಗೆ ಅಂಟಿಕೊಂಡಿರುವ ಡೊಕ್ಲಾಂ ಪ್ರದೇಶದಲ್ಲಿ ಚೀನಾ ಸೇನೆ ಒಟ್ಟು 2 ಸೇನಾ ಹೆಲಿಪಾಡ್ ಗಳನ್ನು ನಿರ್ಮಾಣ ಮಾಡಿದೆ. ಅಲ್ಲದೆ ಮೂರು ರಸ್ತೆಗಳನ್ನು ಆಧುನೀಕರಿಸಿದ್ದು,  ಬಂಕರ್ ಗಳನ್ನು ಉನ್ನತೀಕರಿಸಿದೆ. ಇದಲ್ಲದೆ ಆಯಕಟ್ಟಿನ ಪ್ರದೇಶಗಳಲ್ಲಿ ತಾತ್ಕಾಲಿಕ ಶೆಲ್ಟರ್ ಗಳು, ಶೆಡ್ ಗಳನ್ನು ನಿರ್ಮಾಣ ಮಾಡಿದೆ ಎನ್ನಲಾಗಿದೆ.
ಈ ಹಿಂದೆ ಉಭಯ ದೇಶಗಳ ಸಂಧಾನ ಮಾತುಕತೆ ಮೇರೆಗೆ, ಈ ಭಾಗದಲ್ಲಿ ನಿಯೋಜಿಸಿದ್ದ ಸೇನೆಯನ್ನು ಚೀನಾ ಮತ್ತು ಭಾರತ ದೇಶಗಳು ವಾಪಸ್ ಕರೆಸಿಕೊಂಡಿತ್ತು. ಇದಕ್ಕೂ ಮೊದಲು ಈ ಭಾಗದಲ್ಲಿ ಭಾರತ ಮತ್ತು ಚೀನಾ   ಸೈನಿಕರು ಪರಸ್ಪರ ವಾಗ್ವಾದ ನಡೆಸಿದ್ದರಲ್ಲದೇ ಕೈಕೈ ಮಿಲಾಯಿಸಿದ್ದರು. ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಚೀನಾ ಸೈನಿಕರು ಕಲ್ಲು ತೂರಾಟ ಕೂಡ ಮಾಡಿದ್ದರು. ಸುಮಾರು 73 ದಿನಗಳ ಕಾಲ ಹಗ್ಗ ಜಗ್ಗಾಟ ನಡೆದು,   ನಂತರ ಈಶಾನ್ಯ ಭಾಗದೊಂದಿಗೆ ಭಾರತವನ್ನು ಸೇರಿಸುವ ಭಾಗದಲ್ಲಿ ನಿಯೋಜಿಸಿದ್ದ ಸೇನೆಯನ್ನು ಚೀನಾ ಆಗಸ್ಟ್ 28ರಂದು ಹಿಂಪಡೆದಿತ್ತು. ಈ ಭಾಗದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕೂಡ   ಸ್ಥಗಿತಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT