ಸಂಗ್ರಹ ಚಿತ್ರ 
ವಿದೇಶ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವು?

ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ ನೀಡಿಲ್ಲ.

ನವದೆಹಲಿ: ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ  ನೀಡಿಲ್ಲ.
ಮೂಲಗಳ ಪ್ರಕಾರ ಭಾರತೀಯ ಗುಪ್ತಚರ ಇಲಾಖೆಗೆ ಪಾಕಿಸ್ತಾನದಿಂದ ಎರಡು ದೂರವಾಣಿ ಕರೆಗಳ ಧ್ವನಿ ಮುದ್ರಿಕೆಗಳು ಲಭ್ಯವಾಗಿದ್ದು, ಇದರಲ್ಲಿ ಪಾತಕಿ ಛೋಟಾ ಶಕೀಲ್ ಸಾವಿನ ಕುರಿತಾದ ಅಂಶಗಳು ಅಡಕವಾಗಿವೆ ಎಂದು  ಹೇಳಲಾಗಿದೆ. ಒಂದು ಧ್ವನಿ ಮುದ್ರಿಕೆಯಲ್ಲಿ ಕಳೆದ ಜನವರಿ 6ರಂದೇ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಛೋಟಾ ಶಕೀಲ್ ಸಾವನ್ನಪ್ಪಿದ್ದು, ಒಂದು ಮೂಲದ ಪ್ರಕಾರ ಆತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು  ಶಂಕಿಸಿದ್ದು, ಆತ ಸಭೆಯಲ್ಲಿ ಕುಸಿದು ಬೀಳುತ್ತಿದ್ದಂತೆಯೇ ಆತನ ಭದ್ರತಾ ಸಿಬ್ಬಂದಿಗಳು ಏರ್ ಆ್ಯಂಬುಲೆನ್ಸ್ ಮೂಲಕ ರಾವಲ್ ಪಿಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಷ್ಟು ಹೊತ್ತಿಗಾಗಲೇ ಆತ ಸಾವನ್ನಿಪ್ಪಿದ್ದ ಎಂದು  ಹೇಳಲಾಗಿದೆ.
ಅಂತೆಯೇ ಮತ್ತೊಂದು ವರದಿಯಲ್ಲಿ ಆತ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ನಿಂದಲೇ ಹತ್ಯೆಗೀಡಾಗಿದ್ದ ಎಂದು ಹೇಳಲಾಗಿದೆ. ಐಎಸ್ ಐ ಪಾಕಿಸ್ತಾನ ಒಡೆಸ್ಸಾ ನೆರವಿನ ಮೂಲಕ ಛೋಟಾ ಶಕೀಲ್ ನನ್ನು  ಹೊಡೆದುರುಳಿಸಿದೆ. ಆತನ ಮೃತ ದೇಹ ಸಿ-30 ವಿಮಾನದಲ್ಲಿ ಕರಾಚಿಗೆ ರವಾನೆ ಮಾಡಲಾಗಿತ್ತು ಎಂದೂ ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ ಪಾಕಿಸ್ತಾನದ ರಕ್ಷಣಾ ಇಲಾಖೆಯ ಅಧೀನದಲ್ಲಿರುವ ಸ್ಮಶಾನದಲ್ಲಿ ಆತನನ್ನು ಸಮಾಧಿ  ಮಾಡಲಾಗಿದೆ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ಶಕೀಲ್ ಸಾವಿನ ಬಳಿಕ ಆತನ ಡಿ -48, 15 ನೇ ಲೇನ್, ಖಯಾಬಾನ್-ಸೆಹರ್, ಡಿ.ಎಚ್.ಎ ಕಾಲೊನೀ ನಿವಾಸದಿಂದ ಆತನ ಕುಟುಂಬವನ್ನು ತೆರವುಗೊಳಿಸಲಾಗಿದ್ದು, ಲಾಹೋರ್ ನಲ್ಲಿರುವ ಐಎಸ್ ಐ ಅಧೀನದ ಮನೆಗೆ  ಸ್ಥಳಾಂತರಗೊಳಿಸಲಾಗಿದೆ ಎಂದು ವರದಿಯಲ್ಲಿ ಶಂಕಿಸಲಾಗಿದೆ. ಮೃತ ಶಕೀಲ್ ಗೆ ಇಬ್ಬರು ಪತ್ನಿಯರು, ಓರ್ವ ಪುತ್ರ, ಇಬ್ಬರು ಪುತ್ರಿಯರು, ಮತ್ತು ಓರ್ಪ ಮೊಮ್ಮಗಳಿದ್ದಳು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT