ಸಂಗ್ರಹ ಚಿತ್ರ 
ವಿದೇಶ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವು?

ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ ನೀಡಿಲ್ಲ.

ನವದೆಹಲಿ: ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ಭೂಗತ ಪಾತಕಿ ದಾವೂಜದ್ ಇಬ್ರಾಹಿಂ ಬಲಗೈ ಭಂಟ ಛೋಟಾ ಶಕೀಲ್ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಗುಪ್ತಚರ ಇಲಾಖೆ ಸ್ಪಷ್ಟನೆ  ನೀಡಿಲ್ಲ.
ಮೂಲಗಳ ಪ್ರಕಾರ ಭಾರತೀಯ ಗುಪ್ತಚರ ಇಲಾಖೆಗೆ ಪಾಕಿಸ್ತಾನದಿಂದ ಎರಡು ದೂರವಾಣಿ ಕರೆಗಳ ಧ್ವನಿ ಮುದ್ರಿಕೆಗಳು ಲಭ್ಯವಾಗಿದ್ದು, ಇದರಲ್ಲಿ ಪಾತಕಿ ಛೋಟಾ ಶಕೀಲ್ ಸಾವಿನ ಕುರಿತಾದ ಅಂಶಗಳು ಅಡಕವಾಗಿವೆ ಎಂದು  ಹೇಳಲಾಗಿದೆ. ಒಂದು ಧ್ವನಿ ಮುದ್ರಿಕೆಯಲ್ಲಿ ಕಳೆದ ಜನವರಿ 6ರಂದೇ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ಛೋಟಾ ಶಕೀಲ್ ಸಾವನ್ನಪ್ಪಿದ್ದು, ಒಂದು ಮೂಲದ ಪ್ರಕಾರ ಆತ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು  ಶಂಕಿಸಿದ್ದು, ಆತ ಸಭೆಯಲ್ಲಿ ಕುಸಿದು ಬೀಳುತ್ತಿದ್ದಂತೆಯೇ ಆತನ ಭದ್ರತಾ ಸಿಬ್ಬಂದಿಗಳು ಏರ್ ಆ್ಯಂಬುಲೆನ್ಸ್ ಮೂಲಕ ರಾವಲ್ ಪಿಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅಷ್ಟು ಹೊತ್ತಿಗಾಗಲೇ ಆತ ಸಾವನ್ನಿಪ್ಪಿದ್ದ ಎಂದು  ಹೇಳಲಾಗಿದೆ.
ಅಂತೆಯೇ ಮತ್ತೊಂದು ವರದಿಯಲ್ಲಿ ಆತ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ ನಿಂದಲೇ ಹತ್ಯೆಗೀಡಾಗಿದ್ದ ಎಂದು ಹೇಳಲಾಗಿದೆ. ಐಎಸ್ ಐ ಪಾಕಿಸ್ತಾನ ಒಡೆಸ್ಸಾ ನೆರವಿನ ಮೂಲಕ ಛೋಟಾ ಶಕೀಲ್ ನನ್ನು  ಹೊಡೆದುರುಳಿಸಿದೆ. ಆತನ ಮೃತ ದೇಹ ಸಿ-30 ವಿಮಾನದಲ್ಲಿ ಕರಾಚಿಗೆ ರವಾನೆ ಮಾಡಲಾಗಿತ್ತು ಎಂದೂ ವರದಿಯಲ್ಲಿ ತಿಳಿಸಲಾಗಿದೆ. ಅಲ್ಲದೆ ಪಾಕಿಸ್ತಾನದ ರಕ್ಷಣಾ ಇಲಾಖೆಯ ಅಧೀನದಲ್ಲಿರುವ ಸ್ಮಶಾನದಲ್ಲಿ ಆತನನ್ನು ಸಮಾಧಿ  ಮಾಡಲಾಗಿದೆ ಎಂದೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ ಶಕೀಲ್ ಸಾವಿನ ಬಳಿಕ ಆತನ ಡಿ -48, 15 ನೇ ಲೇನ್, ಖಯಾಬಾನ್-ಸೆಹರ್, ಡಿ.ಎಚ್.ಎ ಕಾಲೊನೀ ನಿವಾಸದಿಂದ ಆತನ ಕುಟುಂಬವನ್ನು ತೆರವುಗೊಳಿಸಲಾಗಿದ್ದು, ಲಾಹೋರ್ ನಲ್ಲಿರುವ ಐಎಸ್ ಐ ಅಧೀನದ ಮನೆಗೆ  ಸ್ಥಳಾಂತರಗೊಳಿಸಲಾಗಿದೆ ಎಂದು ವರದಿಯಲ್ಲಿ ಶಂಕಿಸಲಾಗಿದೆ. ಮೃತ ಶಕೀಲ್ ಗೆ ಇಬ್ಬರು ಪತ್ನಿಯರು, ಓರ್ವ ಪುತ್ರ, ಇಬ್ಬರು ಪುತ್ರಿಯರು, ಮತ್ತು ಓರ್ಪ ಮೊಮ್ಮಗಳಿದ್ದಳು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT