ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ನಿರ್ಬಂಧ ಆದೇಶ: ರಾಷ್ಟಕ್ಕೆ ಏನಾದರೂ ಆದರೆ ನ್ಯಾಯಾಲಯದ ವ್ಯವಸ್ಥೆಯನ್ನು ದೂಷಿಸಿ- ಟ್ರಂಪ್

ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ಹೇರಲಾಗಿದ್ದ ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮುಂದೆ ರಾಷ್ಟ್ರದಲ್ಲಿ ಏನಾದರೂ ಕೆಟ್ಟ ಬೆಳವಣಿಗೆಗಳು...

ವಾಷಿಂಗ್ಟನ್: ಮುಸ್ಲಿಂ ರಾಷ್ಟ್ರಗಳ ಪ್ರಜೆಗಳ ಮೇಲೆ ಹೇರಲಾಗಿದ್ದ ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಮುಂದೆ ರಾಷ್ಟ್ರದಲ್ಲಿ ಏನಾದರೂ ಕೆಟ್ಟ ಬೆಳವಣಿಗೆಗಳು ಕಂಡು ಬಂದರೆ ನ್ಯಾಯಾಲಯದ ವ್ಯವಸ್ಥೆಯನ್ನು ದೂಷಸಿ ಎಂದು ಸೋಮವಾರ ಹೇಳಿದ್ದಾರೆ.

ನಿರ್ಬಂಧ ಆದೇಶಕ್ಕೆ ನ್ಯಾಯಾಲಯ ನಕಾರ ಪ್ರತಿಕ್ರಿಯೆ ನೀಡಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನ್ಯಾಯಾಧೀಶಕರು ದೇಶವನ್ನು ಇಂತಹ ದೊಡ್ಡ ಗಂಡಾಂತಕ್ಕೆ ಸಿಲುಕಿಸಿದ್ದಾರೆಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ರಾಷ್ಟ್ರದಲ್ಲಿ ಕೆಟ್ಟ ಬೆಳವಣಿಗೆಗಳು ಕಂಡುಬಂದರೆ ನ್ಯಾಯಾಧೀಶರನ್ನು ದೂಷಿಸಿ ಎಂದು ಹೇಳಿದ್ದಾರೆ.

ವಿದೇಶದಿಂದ ಬರುವ ಪ್ರಜೆಗಳನ್ನು ಕಟ್ಟುನಿಟ್ಟಾಗಿ ಹಾಗೂ ಬಹಳ ಎಚ್ಚರಿಕೆಯಿಂದ ಪರಿಶೀಲನೆ ನಡೆಸುವಂತೆ ತವರಿನಲ್ಲಿರುವ ಭದ್ರತಾ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದೆ. ಇದೀಗ ಅವರ ಕೆಲಸವನ್ನು ನ್ಯಾಯಾಲಯ ಬಹಳ ಸುಲಭವಾಗಿದೆ ಎಂದು ಸರಣಿ ಟ್ವೀಟ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಡೊನಾಲ್ಡ್ ಟ್ರಂಪ್ ಅವರು ಈ ಹಿಂದೆ ಕಠಿಣ ಹಾಗೂ ವಿವಾದಾತ್ಮಕ ನಿರ್ಧಾರವೊಂದನ್ನು ಕೈಗೊಂಡಿದ್ದರು. ಭಯೋತ್ಪಾದನೆ ಬೆದರಿಕೆಯುಳ್ಳ 7 ಮುಸ್ಲಿಂ ರಾಷ್ಟ್ರಗಳಾದ ಇರಾಕ್, ಇರಾನ್, ಸುಡಾನ್, ಲಿಬಿಯಾ, ಯೆಮೆನ್ ಮತ್ತು ಸೊಮಾಲಿಯಾ ದೇಶಗಳ ನಾಗರೀಕರು ಅಮೆರಿಕ ರಾಷ್ಟ್ರವನ್ನು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿತ್ತು. ಈ ನಿರ್ಧಾರಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗಿದ್ದವು.

ಟ್ರಂಪ್ ಅವರ ಆದೇಶಕ್ಕೆ ಸಿಯಾಟಲ್ ನ ಕೆಳ ನ್ಯಾಯಾಲಯ ನೀಡಿದ್ದ ತಡೆ ಪ್ರಶ್ನಿಸಿ ಸ್ಯಾನ್ ಫ್ರಾನ್ಸಿಸ್ಕೋದ ಮೇಲ್ಮನವಿ ನ್ಯಾಯಾಲಯಕ್ಕೆ ಅಮೆರಿದ ನ್ಯಾಯಾಂಗ ಇಲಾಖೆ ಮನವಿ ಸಲ್ಲಿಸಿತ್ತು. ಟ್ರಂಪ್ ಆಡಳಿತ ಸಲ್ಲಿಸಿದ್ದ ಈ ಮನವಿಯನ್ನು ಮೇಲ್ಮನವಿ ನ್ಯಾಯಾಲಯ ತಿರಸ್ಕರಿಸಿತ್ತು. ಇದರಂತೆ ಟ್ರಂಪ್ ಅವರಿಗೆ ಹಿನ್ನಡೆಯುಂಟಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT