ವಿದೇಶ

ಹಿಂದೂ ಮಹಾಸಾಗರದಲ್ಲಿ ಹೆಚ್ಚುತ್ತಿರುವ ಅಣುಶಕ್ತಿಯ ಬಗ್ಗೆ ಪಾಕಿಸ್ತಾನಕ್ಕೆ ಆತಂಕ

ಹಿಂದೂ ಮಹಾಸಾಗರದಲ್ಲಿ ಅಣ್ವಸ್ತ್ರ ಶಕ್ತಿ ಹೆಚ್ಚುತ್ತಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಭಾರತದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಶಕ್ತಿಯ ಅಪಾಯಗಳನ್ನು ನಿಗ್ರಹಿಸುವುದಾಗಿ ವಿಶ್ವಾಸ ವ್ಯಕ್ತಪದಿಸಿದೆ.

ಇಸ್ಲಾಮಾಬಾದ್: ಹಿಂದೂ ಮಹಾಸಾಗರದಲ್ಲಿ ಅಣ್ವಸ್ತ್ರ ಶಕ್ತಿ ಹೆಚ್ಚುತ್ತಿರುವುದರ ಬಗ್ಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದ್ದು, ಭಾರತದಿಂದ ಹೆಚ್ಚುತ್ತಿರುವ ಅಣ್ವಸ್ತ್ರ ಶಕ್ತಿಯ ಅಪಾಯಗಳನ್ನು ನಿಗ್ರಹಿಸುವುದಾಗಿ ವಿಶ್ವಾಸ ವ್ಯಕ್ತಪದಿಸಿದೆ. 
ವಿದೇಶಿ ಸೇನೆಯ ಸೇನಾ ಬಲ, ಸಮೂಹ ನಾಶಕ ಶಸ್ತ್ರಾಸ್ತ್ರಗಳ ಪ್ರಸರಣ, ಕ್ಷಿಪಣಿ ಶಕ್ತಿ ಹೆಚ್ಚುತ್ತಿರುವುದು ಹಿಂದೂ ಮಹಾಸಾಗರದಲ್ಲಿ ಶಾಂತಿಗೆ ಧಕ್ಕೆ ಉಂಟು ಮಾಡುತ್ತಿದೆ. ಇದರೊಂದಿಗೆ ಅಕ್ರಮ ಮೀನುಗಾರಿಕೆ, ಮಾನವ ಕಳ್ಳ ಸಾಗಣೆ, ಶಸ್ತ್ರಾಸ್ತ್ರ ಕಳ್ಳ ಸಾಗಣೆ ಹವಾಮಾನ ಬದಲಾವಣೆ ಸೇರಿದಂತೆ ಹಲವು ಸಮಸ್ಯೆಗಳೂ ಎದುರಾಗಿದ್ದು ಪಾಕಿಸ್ತಾನ ಅವುಗಳನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಪಾಕ್ ನ ವಿದೇಶಾಂಗ ಇಲಾಖೆ ಸಲಹೆಗಾರ ಸರ್ತಾಜ್ ಅಜೀಜ್ ಹೇಳಿದ್ದಾರೆ. 
ಮೇಲಿನ ಎಲ್ಲಾ ಆತಂಕಗಳೂ ಮುಂಬರುವ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹಿಂದೂ ಮಹಾಸಾಗರಕ್ಕೆ ಸಂಬಂಧಿಸಿದಂತೆ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಕಡಲ ಕಾನ್ಫರೆನ್ಸ್ ನಲ್ಲಿ ಹೇಳಿದ್ದು, ಹಿಂದೂ ಮಹಾಸಾಗರ ಪ್ರದೇಶದ ಭದ್ರತಾ ಹಾಗೂ ಶಾಂತಿಯ ವಿಷಯದಲ್ಲಿ ಪಾಕಿಸ್ತಾನ ಪ್ರಮುಖ ಕಾರ್ಯತಂತ್ರ ಪಾಲುದಾರಿಕೆ ಹೊಂದಿದೆ ಎಂದು ಸರ್ತಾಜ್ ಅಜೀಜ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT