ಹಫೀಜ್ ಸಯೀದ್ 
ವಿದೇಶ

ಉಗ್ರ ಹಫೀಜ್ ಸಯೀದ್ ಹಾಗೂ ಆಪ್ತರ ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಗೊಳಿಸಿದ ಪಾಕ್

ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ತನ್ನ ದೇಶಕ್ಕೆ ಮಾರಕ ಎಂದು ಅರಿತ ಪಾಕಿಸ್ತಾನ ಇದೀಗ, ಸಯೀದ್...

ಇಸ್ಲಾಮಾಬಾದ್: ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ತನ್ನ ದೇಶಕ್ಕೆ ಮಾರಕ ಎಂದು ಅರಿತ ಪಾಕಿಸ್ತಾನ ಇದೀಗ, ಸಯೀದ್ ಗೆ ಹಾಗೂ ಆತನ ಸಂಘಟನೆಯ ಸದಸ್ಯರಿಗೆ ನೀಡಿದ್ದ 44 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ಮಂಗಳವಾರ ರದ್ದುಗೊಳಿಸಿದೆ.
ಜೆಯುಡಿ, ಸಯೀದ್ ಹಾಗೂ ಫಲಹಾ ಇ ಇನ್ಸಾತ್(ಫಿಐಎಫ್) ಸಂಘಟನೆ ವಿರುದ್ಧ ಪಾಕಿಸ್ತಾನ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಅವರ ಬಳಿ ಇರುವ ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಪಂಜಾಬ್ ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತೆಯ ದೃಷ್ಟಿಯಿಂದ ಪಂಜಾಬ್ ಗೃಹ ಇಲಾಖೆ ಸಯೀದ್ ಹಾಗೂ ಆತನ ಆಪ್ತರ 44 ಶಸ್ತ್ರಾಸ್ತ್ರಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪಾಕ್ ಸರ್ಕಾರ ಕಳೆದ ಜನವರಿ 30ರಿಂದ ಹಫೀಸ್ ಸಯೀದ್ ನನ್ನು 90 ದಿನಗಳ ಅವಧಿಗೆ ಲಾಹೋರ್ ನಲ್ಲಿ ಗೃಹ ಬಂಧನದಲ್ಲಿರಿಸಿದೆ. ಅಲ್ಲದೆ ಸಯೀದ್ ಸೇರಿದಂತೆ ಜೆಯುಡಿ ಮತ್ತು ಫಿಐಎಫ್ 37 ಸದಸ್ಯರಿಗೆ ದೇಶಬಿಟ್ಟು ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.
ಇಂದು ಬೆಳಗ್ಗೆಯಷ್ಟೆ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್, ನಮ್ಮ ದೇಶಕ್ಕೆ ಅಪಾಯ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸೀಫ್ ಹೇಳಿದ್ದರು. ಈ ಮೂಲಕ ರಾಷ್ಟ್ರೀಯ ಹಿತಾಸಕ್ತಿಗೆ ಉಗ್ರ ಹಫೀಜ್ ಸಯೀದ್ ಮಾರಕವಾಗಿದ್ದಾನೆ ಎಂದು ಖಾವಾಜಾ ಆಸೀಫ್ ಒಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT