ಎಸ್. ಜೈಶಂಕರ್- 
ವಿದೇಶ

ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿದ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್

ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಬೀಜಿಂಗ್: ಭಾರತೀಯ ವಿದೇಶಾಂಗ ಕಾರ್ಯದರ್ಶಿ ಎಸ್ ಜೈಶಂಕರ್ ಫೆ.22 ರಂದು ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. 
ಬೀಜಿಂಗ್ ನಲ್ಲಿ ಉಭಯ ದೇಶದ ಪ್ರತಿನಿಧಿಗಳು ಮಾತುಕತೆ ನಡೆಸಿದ್ದು, ಎನ್ಎಸ್ ಜಿ ಹಾಗೂ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಕುರಿತು ಮಹತ್ವದ ಮಾತುಕತೆ ನಡೆದಿರುವ ಸಾಧ್ಯತೆ ಇದೆ. ಚೀನಾ ವಿದೇಶಾಂಗ ಸಚಿವರನ್ನು ಭೇಟಿ ಮಾಡುವುದಕ್ಕೂ ಮುನ್ನ ಚೀನಾದ ವಿದೇಶಾಂಗ ಅಧಿಕಾರಿಗಳನ್ನು ಭೇಟಿ ಮಾಡಿ ಜೈಶಂಕರ್ ಮಾತುಕತೆ ನಡೆಸಿದ್ದರು. 
ಮಸೂದ್ ಅಜರ್ ಗೆ ವಿಶ್ವಸಂಸ್ಥೆ ಮೂಲಕ ನಿಷೇಧ ವಿಧಿಸುವ ವಿಚಾರದ ಬಗ್ಗೆ ಭಾರತದೊಂದಿಗೆ ಚರ್ಚೆ ನಡೆಸುವುದಕ್ಕೂ ಮುನ್ನ ಚೀನಾ ಪ್ರತಿಕ್ರಿಯೆ ನೀಡಿದ್ದು, ಭಾರತದ ಪ್ರಸ್ತಾವನೆಯನ್ನು ಬೆಂಬಲಿಸಲು ಮತ್ತಷ್ಟು ಸ್ಪಷ್ಟ ಸಾಕ್ಷಾಧಾರಗಳು ಅಗತ್ಯವಿದೆ ಎಂದು ಇಂದಿನ ಮಾತುಕತೆ ನಡೆಯುವುದಕ್ಕೂ ಮುನ್ನವೇ ಚೀನಾ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಸೂದ್ ಅಜರ್ ಗೆ ನಿಷೇಧ ವಿಧಿಸುವ ಕುರಿತಾದ ಮಾತುಕತೆ ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

SCROLL FOR NEXT