ಅಮೆರಿಕಾ ಕಾಂಗ್ರೆಸ್ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 
ವಿದೇಶ

ಭಾರತೀಯನ ಹತ್ಯೆಯನ್ನು ಅಮೆರಿಕಾ ಉಗ್ರವಾಗಿ ಖಂಡಿಸುತ್ತದೆ: ಡೊನಾಲ್ಡ್ ಟ್ರಂಪ್

ದ್ವೇಷ ಮತ್ತು ಕೆಟ್ಟ ಶಕ್ತಿಗಳ ವಿರುದ್ಧ ಎಲ್ಲಾ ರೀತಿಯಿಂದಲೂ ಹೋರಾಡಲು ದೇಶ ಒಂದಾಗಿದೆ ಎಂದು...

ವಾಷಿಂಗ್ಟನ್: ದ್ವೇಷ ಮತ್ತು ಕೆಟ್ಟ ಶಕ್ತಿಗಳ ವಿರುದ್ಧ ಎಲ್ಲಾ ರೀತಿಯಿಂದಲೂ ಹೋರಾಡಲು ದೇಶ ಒಂದಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕಾ  ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಜಂಟಿ ಅಧಿವೇಶನವನ್ನುದ್ದೇಶಿಸಿ ಮೊದಲ ಭಾಷಣ ಮಾಡಿದ ಅವರು, ದ್ವೇಷ ಹರಡುವುದನ್ನು ನಾವು ಎಲ್ಲಾ ರೀತಿಯಿಂದಲೂ ಖಂಡಿಸುತ್ತೇವೆ. ಯಹೂದಿಗಳನ್ನು ಕೇಂದ್ರವಾಗಿಟ್ಟುಕೊಂಡು ಬೆದರಿಕೆಯೊಡ್ಡುವುದನ್ನು ಮತ್ತು ಕಾನ್ಸಾಸ್ ನಲ್ಲಿ ಭಾರತೀಯ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡುವುದು ದೇಶದ ಹಿತಾಸಕ್ತಿಗೆ ಉತ್ತಮವಲ್ಲ ಎಂದು ಹೇಳಿದರು.
ಹಿಂಸಾಕೃತ್ಯ ಅಪರಾಧಗಳನ್ನು ಕಡಿಮೆ ಮಾಡಲು ಕಾರ್ಯಪಡೆಯನ್ನು ರಚಿಸುವಂತೆ ಅಮೆರಿಕಾ ನ್ಯಾಯ ವಿಭಾಗಕ್ಕೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.ಭಾಷಣಕ್ಕೂ ಮುನ್ನ ಕಾನ್ಸಾಸ್ ಶೂಟಿಂಗ್ ನಲ್ಲಿ ಬಲಿಯಾದ ಶ್ರೀನಿವಾಸ್ ಗೆ ಅಮೆರಿಕಾ ಕಾಂಗ್ರೆಸ್ ಒಂದು ನಿಮಿಷದ ಮೌನಾಚರಣೆ ಸಲ್ಲಿಸಿತು.
ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಶ್ವೇತಭವನದ ವಕ್ತಾರರು ಕಾನ್ಸಾಸ್ ಶೂಟಿಂಗ್ ನ್ನು ಖಂಡಿಸಿ, ಇದೊಂದು ಜನಾಂಗೀಯ ಪ್ರೇರೇಪಿತ ದ್ವೇಷ ಎಂದು ಕಂಡುಬರುತ್ತಿದೆ ಎಂದು ಹೇಳಿದ್ದರು.
ಅಮೆರಿಕಾ ನೌಕಾಪಡೆಯ ನಿವೃತ್ತ ಅಧಿಕಾರಿ ಆಡಮ್ ಪುರಿಂಟೊನ್ ಎಂಬಾತ ಕಳೆದ ವಾರ ಭಾರತೀಯ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಬೊಟ್ಲಾನನ್ನು ಕಾನ್ಸಾಸ್ ನ ಆಸ್ಟಿನ್ ಬಾರ್ ಅಂಡ್ ಗ್ರಿಲ್ಸ್ ನಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದನು.
ಪುರಿಂಟೊನ್ ಮಿಸ್ಸೊರಿಯ ಕ್ಲಿಂಟನ್ ನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಶ್ರೀನಿವಾಸ್ ನ ಅಂತ್ಯಸಂಸ್ಕಾರ ನಿನ್ನೆ ಹೈದರಾಬಾದಿನ ಅವರ ನಿವಾಸದಲ್ಲಿ ನಡೆಯಿತು. ನೂರಾರು ಮಂದಿ ಭಾವಪೂರ್ಣ ವಿದಾಯ ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT